<p>ಪುತ್ತೂರು: ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ, ಅಕ್ರಮವಾಗಿ ಲಾರಿಯೊಂದರಲ್ಲಿ ಕೆಂಪುಕಲ್ಲು ಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿರುವ ಸಂಪ್ಯ ಠಾಣೆ ಪೊಲೀಸರು, ಲಾರಿಯನ್ನು ವಶಕ್ಕೆ ಪಡೆದು ಚಾಲಕ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.</p>.<p>ಸಂಟ್ಯಾರು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಲಾರಿಯನ್ನು ಪೊಲೀಸರು ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಪ್ಯ ಠಾಣೆಯ ಎದುರು ತಡೆದು ನಿಲ್ಲಿಸಿ ವಿಚಾರಿಸಿದಾಗ ಕೇರಳದ ಕಾಸರಗೋಡಿನ ಪೆರ್ಲ ಎಂಬಲ್ಲಿಂದ ಬೆಳ್ತಂಗಡಿ ತಾಲ್ಲೂಕಿನ ಉಜಿರೆಗೆ ಕೆಂಪುಕಲ್ಲು ಸಾಗಣೇ ಮಾಡುತ್ತಿರುವುದಾಗಿ ಲಾರಿ ಚಾಲಕ ತಿಳಿಸಿದ್ದು, ಪೊಲೀಸರು ಪರವಾನಗಿ ಪರಿಶೀಲಿಸಿದ್ದಾರೆ.</p>.<p>ಕೆಂಪು ಕಲ್ಲು ಸಾಗಣೆ ದಾಖಲೆಯಲ್ಲಿ ದಿನಾಂಕ ಮತ್ತು ಸಮಯವನ್ನು ಅಳಿಸಿ ಹಾಕಿ, ಸಾಗಣೆ ದಾಖಲೆಪತ್ರದ ನಕಲಿ ಪ್ರತಿ ಸೃಷ್ಟಿಸಿ ಕೆಂಪುಕಲ್ಲುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವ ವಿಚಾರ ತಿಳಿದು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಆರೋಪಿ ಲಾರಿ ಚಾಲಕ ಸತೀಶ್, ಲಾರಿ ಮಾಲೀಕ ಇಸಾಕ್ ಟಿ ಮತ್ತು ಕೆಂಪು ಕಲ್ಲಿನ ಕ್ವಾರಿಯ ಮಾಲೀಕ ಜೋಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-29-1626515609</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ, ಅಕ್ರಮವಾಗಿ ಲಾರಿಯೊಂದರಲ್ಲಿ ಕೆಂಪುಕಲ್ಲು ಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿರುವ ಸಂಪ್ಯ ಠಾಣೆ ಪೊಲೀಸರು, ಲಾರಿಯನ್ನು ವಶಕ್ಕೆ ಪಡೆದು ಚಾಲಕ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.</p>.<p>ಸಂಟ್ಯಾರು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಲಾರಿಯನ್ನು ಪೊಲೀಸರು ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಪ್ಯ ಠಾಣೆಯ ಎದುರು ತಡೆದು ನಿಲ್ಲಿಸಿ ವಿಚಾರಿಸಿದಾಗ ಕೇರಳದ ಕಾಸರಗೋಡಿನ ಪೆರ್ಲ ಎಂಬಲ್ಲಿಂದ ಬೆಳ್ತಂಗಡಿ ತಾಲ್ಲೂಕಿನ ಉಜಿರೆಗೆ ಕೆಂಪುಕಲ್ಲು ಸಾಗಣೇ ಮಾಡುತ್ತಿರುವುದಾಗಿ ಲಾರಿ ಚಾಲಕ ತಿಳಿಸಿದ್ದು, ಪೊಲೀಸರು ಪರವಾನಗಿ ಪರಿಶೀಲಿಸಿದ್ದಾರೆ.</p>.<p>ಕೆಂಪು ಕಲ್ಲು ಸಾಗಣೆ ದಾಖಲೆಯಲ್ಲಿ ದಿನಾಂಕ ಮತ್ತು ಸಮಯವನ್ನು ಅಳಿಸಿ ಹಾಕಿ, ಸಾಗಣೆ ದಾಖಲೆಪತ್ರದ ನಕಲಿ ಪ್ರತಿ ಸೃಷ್ಟಿಸಿ ಕೆಂಪುಕಲ್ಲುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವ ವಿಚಾರ ತಿಳಿದು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಆರೋಪಿ ಲಾರಿ ಚಾಲಕ ಸತೀಶ್, ಲಾರಿ ಮಾಲೀಕ ಇಸಾಕ್ ಟಿ ಮತ್ತು ಕೆಂಪು ಕಲ್ಲಿನ ಕ್ವಾರಿಯ ಮಾಲೀಕ ಜೋಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-29-1626515609</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>