‘ಮಹಾರಾಷ್ಟ್ರದ ಬಾಂದ್ರಾ ಪೂರ್ವದ ಎವರ್ ಗ್ರೀನ್ ಹೋಟೆಲ್ ಬಳಿ ಪಾನ್ ಬೀಡ ಅಂಗಡಿ ಹೊಂದಿದ್ದ ಶಶಿಪೂಜಾರಿ ಈಚೆಗೆ ಮೃತಪಟ್ಟಿದ್ದಾರೆ. ಅವರು ತಾನು ಪುತ್ತೂರಿನವರು ಎಂದು ನಮ್ಮಲ್ಲಿ ಹೇಳಿ ಕೊಳ್ಳುತ್ತಿದ್ದರು. ನನ್ನ ಸಹೋದರ, ಸಹೋದರಿ ಪುತ್ತೂರಿನಲ್ಲಿ ಇದ್ದಾರೆ ಎಂದು ತಿಳಿಸಿದ್ದರು. ಇವರ ವಾರಿಸುದಾರರು ಯಾರಾದರೂ ಇದ್ದರೆ ಕೂಡಲೇ ನಮ್ಮನ್ನು ಸಂಪರ್ಕಿಸಿ’ ಎಂದು ಕೆಲವು ದಿನಗಳಿಂದ ಮೃತರ ಭಾವಚಿತ್ರ ಹಾಗೂ ಮುಂಬೈಯಲ್ಲಿರುವ ಕೆಲವರ ಮೊಬೈಲ್ ಫೋನ್ ನಂಬರ್ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಡುತ್ತಿತ್ತು. ಭಾವಚಿತ್ರದ ಆಧಾರದಲ್ಲಿ ಮನೆಯವರು ಗುರುತು ಪತ್ತೆ ಹಚ್ಚಿದ್ದಾರೆ.