<p><strong>ಪುತ್ತೂರು:</strong> ತಾಲ್ಲೂಕಿನ ಬೆಟ್ಟಂಪಾಡಿ ಹಾಗೂ ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳೂ ಶಾಸಕ ಅಶೋಕ್ಕುಮಾರ್ಕ್ ರೈ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಕಾಲೇಜಿನಲ್ಲಿ ಪ್ರಸ್ತುತ ಕಾಯಂ ಉಪನ್ಯಾಸಕರು ಮಾತ್ರ ಇದ್ದು, ಅತಿಥಿ ಶಿಕ್ಷಕರ ಕೊರತೆಯಿಂದಾಗಿ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ. ಶೀಘ್ರವಾಗಿ ಅತಿಥಿ ಉಪನ್ಯಾಸಕರ ನೇಮಕ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಸಲ್ಲಿಸಿದರು.</p>.<p>ಅತಿಥಿ ಉಪನ್ಯಾಸಕರ ನೇಮಕಾತಿ ವೇಳೆ ಗುಣಮಟ್ಟದ ಶಿಕ್ಷಕರನ್ನೇ ನೇಮಕ ಮಾಡಬೇಕೆಂಬ ಶಿಕ್ಷಣ ಇಲಾಖೆಯ ಆದೇಶ ಇದೆ. ಕೇವಲ ಪದವಿ ಶಿಕ್ಷಣ ಪಡೆದ ಮಾತ್ರಕ್ಕೆ ಉಪನ್ಯಾಸ ಮಾಡಲು ಸಾಧ್ಯವಿಲ್ಲ. ಪಿಎಚ್ಡಿ ಸೇರಿದಂತೆ ಉನ್ನತ ವ್ಯಾಸಂಗ ಮಾಡಿರಬೇಕು ಎಂಬ ನಿಯಮ ಇರುವುದರಿಂದ ಈ ಹಿಂದೆ ಅತಿಥಿ ಉಪನ್ಯಾಸಕರಾಗಿದ್ದವರು ಶಿಕ್ಷಣ ಇಲಾಖೆಯ ಹೊಸ ಆದೇಶದ ವಿರುದ್ಧ ನ್ಯಾಯಾಲಯ ಮೆಟ್ಟಿಲೇರಿದ ಕಾರಣ ನೇಮಕಾತಿ ವಿಳಂಬವಾಗಿದೆ. ಸಚಿವರ ಜತೆ ಮತ್ತು ಇಲಾಖೆ ಪ್ರಮುಖರ ಜತೆ ಮಾತನಾಡಿ 15ದಿನಗಳೊಳಗೆ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ತಾಲ್ಲೂಕಿನ ಬೆಟ್ಟಂಪಾಡಿ ಹಾಗೂ ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳೂ ಶಾಸಕ ಅಶೋಕ್ಕುಮಾರ್ಕ್ ರೈ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಕಾಲೇಜಿನಲ್ಲಿ ಪ್ರಸ್ತುತ ಕಾಯಂ ಉಪನ್ಯಾಸಕರು ಮಾತ್ರ ಇದ್ದು, ಅತಿಥಿ ಶಿಕ್ಷಕರ ಕೊರತೆಯಿಂದಾಗಿ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ. ಶೀಘ್ರವಾಗಿ ಅತಿಥಿ ಉಪನ್ಯಾಸಕರ ನೇಮಕ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಸಲ್ಲಿಸಿದರು.</p>.<p>ಅತಿಥಿ ಉಪನ್ಯಾಸಕರ ನೇಮಕಾತಿ ವೇಳೆ ಗುಣಮಟ್ಟದ ಶಿಕ್ಷಕರನ್ನೇ ನೇಮಕ ಮಾಡಬೇಕೆಂಬ ಶಿಕ್ಷಣ ಇಲಾಖೆಯ ಆದೇಶ ಇದೆ. ಕೇವಲ ಪದವಿ ಶಿಕ್ಷಣ ಪಡೆದ ಮಾತ್ರಕ್ಕೆ ಉಪನ್ಯಾಸ ಮಾಡಲು ಸಾಧ್ಯವಿಲ್ಲ. ಪಿಎಚ್ಡಿ ಸೇರಿದಂತೆ ಉನ್ನತ ವ್ಯಾಸಂಗ ಮಾಡಿರಬೇಕು ಎಂಬ ನಿಯಮ ಇರುವುದರಿಂದ ಈ ಹಿಂದೆ ಅತಿಥಿ ಉಪನ್ಯಾಸಕರಾಗಿದ್ದವರು ಶಿಕ್ಷಣ ಇಲಾಖೆಯ ಹೊಸ ಆದೇಶದ ವಿರುದ್ಧ ನ್ಯಾಯಾಲಯ ಮೆಟ್ಟಿಲೇರಿದ ಕಾರಣ ನೇಮಕಾತಿ ವಿಳಂಬವಾಗಿದೆ. ಸಚಿವರ ಜತೆ ಮತ್ತು ಇಲಾಖೆ ಪ್ರಮುಖರ ಜತೆ ಮಾತನಾಡಿ 15ದಿನಗಳೊಳಗೆ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>