ದೇವಳದ ಎದುರಿನ ವಿಶಾಲವಾದ ಗದ್ದೆಯಲ್ಲಿ ಈತನಕ ದೇವಳಕ್ಕೆ ಬರುವ ಭಕ್ತರು ಮಾತ್ರವಲ್ಲದೆ ಬಹಳಷ್ಟು ಮಂದಿ ವಾಹನ ನಿಲುಗಡೆ ಮಾಡುತ್ತಿದ್ದರು. ಆದರೆ, ಇನ್ನು ಮುಂದೆ ಗದ್ದೆಯಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲುಗಡೆ ಮಾಡಿ ಹೋಗುವಂತಿಲ್ಲ. ದೇವಳಕ್ಕೆ ಸೇರಿದ ಜಾಗದಲ್ಲಿ ಹಿಂದೂ ಭಕ್ತರಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಟ್ಟಿರುವುದು ಇಲ್ಲಿನ ಇತಿಹಾಸದಲ್ಲಿ ಹೊಸ ಬೆಳವಣಿಗೆಯಾಗಿದೆ.