<p>ಪುತ್ತೂರು: ‘ದೇಶದ ಅಭಿವೃದ್ಧಿಗಾಗಿ ಕೆಲವೊಮ್ಮೆ ಕಠಿಣ ನಿರ್ಧಾರ ಕೈಗೊಳ್ಳುವುದು ಅಗತ್ಯವಾಗುತ್ತದೆ. ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ಬೊಳುವಾರಿನಲ್ಲಿ ನಗರ ಸಭೆಯ ಕಟ್ಟಡ ತೆರವಿಗೆ ಆಕ್ಷೇಪಣೆಯಿತ್ತು. ಅದನ್ನು ತಳ್ಳಿ ಹಾಕಿ ತೆರವುಗೊಳಿಸಲಾಗಿದೆ. ಕಟ್ಟಡ ತೆರವಿಗೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ’ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.</p>.<p>ಪುತ್ತೂರು- ಉಪ್ಪಿನಂಗಡಿ ಚತುಷ್ಪಥ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಬೊಳುವಾರಿನಲ್ಲಿ ರಸ್ತೆ ಅಭಿವೃದ್ಧಿಗಾಗಿ ಕಟ್ಟಡ ತೆರವುಗೊಳಿಸುವ ಕಾರ್ಯ ವೀಕ್ಷಿಸಿ ಅವರು ಮಾತನಾಡಿದರು.</p>.<p>ಎರಡು ಮೂರು ಮನೆಯವರ ಆಕ್ಷೇಪಣೆಯಿದ್ದು, ಅವರ ಮನವೊಳಿಸಲಾಗುವುದು. ಆ ಮನೆಯವರಿಗೆ ಉಪ ನೋಂದಣಾಧಿಕಾರಿ ನಿಗದಿ ಪಡಿಸಿದ ಬೆಲೆಗಿಂತ ಮೂರು ಪಟ್ಟು ಹೆಚ್ಚು ಪರಿಹಾರ ನೀಡಲಾಗುವುದು. ಹಾಗಿದ್ದರೂ ಬಿಡದಿದ್ದರೆ ಕಾನೂನಾತ್ಮಕವಾಗಿಯಾದರೂ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದರು.</p>.<p>ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡರು. ಚತುಷ್ಪಥ ಕಾಮಗಾರಿಗೆ ಬೊಳುವಾರಿನಲ್ಲಿ ನಗರ ಸಭೆಯ ಕಟ್ಟಡ ತೆರವುಗೊಳಿಸಲಾಗಿದೆ. ಅಲ್ಲದೆ, ಇಲ್ಲಿರುವ ಶೌಚಾಲಯ, ಗೂಡಂಗಡಿ ತೆರವುಗೊಳಿಸಲಾಗುವುದು. ಮುಂದಿನ 25-30ವರ್ಷದ ಮನ್ನೋಟ ಇಟ್ಟು ರಸ್ತೆ ಕಾರ್ಯ ನಡೆಸಲಾಗುವುದು. ಈ ಹಿಂದೆ 10 ಮೀಟರ್ ರಸ್ತೆಯ ಯೋಜನೆಯಿತ್ತು. ಅದನ್ನು ಕೈಬಿಟ್ಟು ಚತುಷ್ಪಥ ರಸ್ತೆ ನಿರ್ಮಾಣಗೊಳ್ಳಲಿದೆ. ಮಂಗಳೂರಿನಿಂದ ಬರುವ ವಾಹನಗಳ ದಟ್ಟಣೆ ಆಗದಂತೆ ದೊಡ್ಡ ವೃತ್ತ ನಿರ್ಮಿಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಎಲ್ಲ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.</p>.<p>ನೆಕ್ಕಿಲಾಡಿಯಿಂದ ಉಪ್ಪಿನಂಗಡಿ ತನಕದ ರಸ್ತೆಗೆ ₹13 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಹಂತದಲ್ಲಿದೆ. ₹2.50ಕೋಟಿ ಹೆಚ್ಚುವರಿ ಅನುದಾನ ಮೀಸಲಿಡಲಾಗಿದೆ. ಒಟ್ಟು ₹49 ಕೋಟಿ ಅನುದಾನದಲ್ಲಿ ಈ ರಸ್ತೆ ಅಭಿವೃದ್ಧಿ ನಡೆಯಲಿದೆ ಎಂದು ಅವರು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-29-295436233</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ‘ದೇಶದ ಅಭಿವೃದ್ಧಿಗಾಗಿ ಕೆಲವೊಮ್ಮೆ ಕಠಿಣ ನಿರ್ಧಾರ ಕೈಗೊಳ್ಳುವುದು ಅಗತ್ಯವಾಗುತ್ತದೆ. ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ಬೊಳುವಾರಿನಲ್ಲಿ ನಗರ ಸಭೆಯ ಕಟ್ಟಡ ತೆರವಿಗೆ ಆಕ್ಷೇಪಣೆಯಿತ್ತು. ಅದನ್ನು ತಳ್ಳಿ ಹಾಕಿ ತೆರವುಗೊಳಿಸಲಾಗಿದೆ. ಕಟ್ಟಡ ತೆರವಿಗೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ’ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.</p>.<p>ಪುತ್ತೂರು- ಉಪ್ಪಿನಂಗಡಿ ಚತುಷ್ಪಥ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಬೊಳುವಾರಿನಲ್ಲಿ ರಸ್ತೆ ಅಭಿವೃದ್ಧಿಗಾಗಿ ಕಟ್ಟಡ ತೆರವುಗೊಳಿಸುವ ಕಾರ್ಯ ವೀಕ್ಷಿಸಿ ಅವರು ಮಾತನಾಡಿದರು.</p>.<p>ಎರಡು ಮೂರು ಮನೆಯವರ ಆಕ್ಷೇಪಣೆಯಿದ್ದು, ಅವರ ಮನವೊಳಿಸಲಾಗುವುದು. ಆ ಮನೆಯವರಿಗೆ ಉಪ ನೋಂದಣಾಧಿಕಾರಿ ನಿಗದಿ ಪಡಿಸಿದ ಬೆಲೆಗಿಂತ ಮೂರು ಪಟ್ಟು ಹೆಚ್ಚು ಪರಿಹಾರ ನೀಡಲಾಗುವುದು. ಹಾಗಿದ್ದರೂ ಬಿಡದಿದ್ದರೆ ಕಾನೂನಾತ್ಮಕವಾಗಿಯಾದರೂ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದರು.</p>.<p>ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡರು. ಚತುಷ್ಪಥ ಕಾಮಗಾರಿಗೆ ಬೊಳುವಾರಿನಲ್ಲಿ ನಗರ ಸಭೆಯ ಕಟ್ಟಡ ತೆರವುಗೊಳಿಸಲಾಗಿದೆ. ಅಲ್ಲದೆ, ಇಲ್ಲಿರುವ ಶೌಚಾಲಯ, ಗೂಡಂಗಡಿ ತೆರವುಗೊಳಿಸಲಾಗುವುದು. ಮುಂದಿನ 25-30ವರ್ಷದ ಮನ್ನೋಟ ಇಟ್ಟು ರಸ್ತೆ ಕಾರ್ಯ ನಡೆಸಲಾಗುವುದು. ಈ ಹಿಂದೆ 10 ಮೀಟರ್ ರಸ್ತೆಯ ಯೋಜನೆಯಿತ್ತು. ಅದನ್ನು ಕೈಬಿಟ್ಟು ಚತುಷ್ಪಥ ರಸ್ತೆ ನಿರ್ಮಾಣಗೊಳ್ಳಲಿದೆ. ಮಂಗಳೂರಿನಿಂದ ಬರುವ ವಾಹನಗಳ ದಟ್ಟಣೆ ಆಗದಂತೆ ದೊಡ್ಡ ವೃತ್ತ ನಿರ್ಮಿಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಎಲ್ಲ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.</p>.<p>ನೆಕ್ಕಿಲಾಡಿಯಿಂದ ಉಪ್ಪಿನಂಗಡಿ ತನಕದ ರಸ್ತೆಗೆ ₹13 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಹಂತದಲ್ಲಿದೆ. ₹2.50ಕೋಟಿ ಹೆಚ್ಚುವರಿ ಅನುದಾನ ಮೀಸಲಿಡಲಾಗಿದೆ. ಒಟ್ಟು ₹49 ಕೋಟಿ ಅನುದಾನದಲ್ಲಿ ಈ ರಸ್ತೆ ಅಭಿವೃದ್ಧಿ ನಡೆಯಲಿದೆ ಎಂದು ಅವರು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-29-295436233</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>