ಪ್ರಕರಣದ ಆರೋಪಿಗಳಾದ ಹರೀಶ್ ಕಂಜಿಪಿಲಿ, ಈಶ್ವರಪ್ಪ ಗೌಡ ಹರ್ಲಡ್ಕ, ರವಿಚಂದ್ರ ಕೊಡಪಾಲ, ಸವಿನ್ ಕೊಡಪಾಲ, ದಿವಾಕರ ನಾಯಕ್ ಎರ್ಮೆಟ್ಟಿ, ದಿನೇಶ ಚೆಮ್ನೂರು, ರಾಮಚಂದ್ರ ಹಲ್ದಡ್ಕ, ಷಣ್ಮುಖ ಸೂಟೆಗದ್ದೆ, ಧನಂಜಯ ಬೈಕಾಡಿ, ಬಾಲಕೃಷ್ಣ ಕಂಜಿಪಿಲಿ, ಮನೋಹರ, ದೀಪಕ್ ಎಲಿಮಲೆ ಮನೋಜ್ ಎಂ.ಕೆ. ಮತ್ತು ವಿಶ್ವನಾಥ ಸಿ.ಎಲ್. ಯಾನೆ ವಿಕಾಸ್ ಅವರಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿತ್ತು. ಈ ತೀರ್ಪು ಪ್ರಕಟಿಸಿದ ಸುಳ್ಯ ನ್ಯಾಯಾಲಯವು, ಆರೋಪಿಗಳಿಗೆ ಮೇಲ್ಮನವಿಗೆ 1 ತಿಂಗಳ ಕಾಲಾವಕಾಶ ನೀಡಿ, ಅಲ್ಲಿಯೇ ಜಾಮೀನು ಮಂಜೂರು ಮಾಡಿತ್ತು.