ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನ್ ಸಿಆರ್ಝಡ್ ಪ್ರದೇಶದಲ್ಲಿ ಮರಳು ತೆಗೆಯಲು 25 ಟೆಂಡರ್ದಾರರನ್ನು ಗುರುತಿಸಲಾಗಿದೆ. ಮರಳು ತೆಗೆಯುವ ಪ್ರಕ್ರಿಯೆ ಪ್ರಾರಂಭಿಸುವ ಪೂರ್ವದಲ್ಲಿ ಸ್ಟಾಕ್ಯಾರ್ಡ್ನಲ್ಲಿ ವೇ ಬ್ರಿಡ್ಜ್ ಸ್ಥಾಪಿಸಲು ಅವರಿಗೆ ಅಕ್ಟೋಬರ್ 15ರ ಗಡುವು ನೀಡಲಾಗಿತ್ತು. ಆದರೆ, ಇದು ಇನ್ನೂ ಅನುಷ್ಠಾನವಾಗದ ಕಾರಣ, ಇನ್ನೂ ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ. ವೇ ಬ್ರಿಡ್ಜ್ ಅಳವಡಿಸಿದ ಕೂಡಲೇ ಅನುಮತಿ ನೀಡಲಾಗುತ್ತದೆ. ಅಗತ್ಯವಿದ್ದಲ್ಲಿ ಹೆಚ್ಚಿನ ಬ್ಲಾಕ್ಗಳನ್ನು ಗುರುತಿಸಲು ಯೋಚಿಸಲಾಗುವುದು. ನಾನ್ ಸಿಆರ್ಝಡ್ ಪ್ರದೇಶದಲ್ಲಿ ಜೂನ್ನಿಂದ ಅಕ್ಟೋಬರ್ 15ರವರೆಗೆ ಮರಳು ತೆಗೆಯಲು ಅವಕಾಶ ಇಲ್ಲ’ ಎಂದು ಸ್ಪಷ್ಟಪಡಿಸಿದರು.