ಮಳೆಯಿಂದಾಗಿ ಪಟ್ಟಣದ ರಸ್ತೆಗಳು ಹಳ್ಳದಂತೆ ತುಂಬಿ ಹರಿದವು. ಪೊಲೀಸ್ ಠಾಣೆಯ ಕಾಂಪೌಂಡ್ ಕುಸಿದು ಪಕ್ಕದ ಪ್ರಕಾಶ್ ಚಪ್ಪಲಿ ಅಂಗಡಿ ಮೇಲೆ ಬಿತ್ತು. ಪತ್ರಿಕಾ ವಿತರಕ ನಾಗರಾಜ್ ಭಟ್ ಮನೆ ಕಾಂಪೌಂಡ್ ಕುಸಿದಿದ್ದು ಮನೆಯ ಒಳಗೆ ನೀರು ನುಗ್ಗಿದೆ. ಅಲ್ಲದೆ ನರಸಿಂಹರಾಜಪುರ ರಸ್ತೆಯಲ್ಲಿರುವ ಹಲವು ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ.