ಬೆಳಿಗ್ಗೆ ಹಿರಿಯ ಸಾಹಿತಿಗಳು, ಗಣ್ಯರ ದಂಡೇ ಹರಿದು ಬಂದಿತ್ತು. ಡಾ.ಚೆನ್ನವೀರ ಕಣವಿ, ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ, ಪ್ರೊ.ಐ.ಜಿ.ಸನದಿ, ಚಂದ್ರಕಾಂತ ಬೆಲ್ಲದ, ಡಾ.ಎಚ್.ವಿ.ಮಹೇಶ್ವರಯ್ಯ, ಡಾ.ವೀಣಾ ಶಾಂತೇಶ್ವರ, ಡಾ.ರಾಘವೇಂದ್ರ ಪಾಟೀಲ, ಡಾ.ಮಲ್ಲಿಕಾರ್ಜುನ ಹಿರೇಮಠ, ಕವಿವಿ ಕುಲಸಚಿವ ಡಾ.ಮಲ್ಲಿಕಾರ್ಜುನ ಪಾಟೀಲ ಸೇರಿದಂತೆ ಅನೇಕರು ಗಿರಡ್ಡಿ ನಿವಾಸಕ್ಕೆ ಭೇಟಿ ನೀಡಿ, ಅಂತಿಮ ನಮನ ಸಲ್ಲಿಸಿದರು.