<p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಮಳೆಯಾಗಿದೆ. ಮುಂಜಾನೆ 6 ಗಂಟೆಯ ವೇಳೆ ಗುಡುಗಿನಿಂದೊಡಗೂಡಿದ ಮಳೆ ಆರಂಭವಾಗಿದೆ. ಮಂಗಳೂರು ನಗರ ಸೇರಿದಂತೆ ಅನೇಕ ಭಾಗಗಳಲ್ಲಿ ತುಂತುರು ಹನಿ ಬಿದ್ದಿದ್ದು ಉಳ್ಳಾಲ, ಬಂಟ್ವಾಳ ಮತ್ತು ಪುತ್ತೂರು ತಾಲ್ಲೂಕುಗಳ ಕೆಲವೆಡೆ ಜೋರು ಮಳೆಯಾಗಿದೆ. ಜಿಲ್ಲೆಯಾದ್ಯಂತ ಒಮ್ಮೆ ಬಿಸಿಲು ಮತ್ತೊಮ್ಮೆ ಮೋಡ ಕವಿದ ವಾತಾವರಣ ಇತ್ತು.</p>.<p>ಉಳ್ಳಾಲ ತಾಲ್ಲೂಕಿನ ವ್ಯಾಪ್ತಿಯ ತಲಪಾಡಿ, ಕೋಟೆಕಾರು, ಬೀರಿ, ದೇರಳಕಟ್ಟೆ, ಕುತ್ತಾರು, ತೊಕ್ಕೊಟ್ಟು ಭಾಗದಲ್ಲಿ ಮಳೆಯಾಗಿದೆ. ಮೂಲ್ಕಿ ತಾಲ್ಲೂಕಿನ ಹಳೆಯಂಗಡಿ, ಕಾರ್ನಾಡು, ಬಪ್ಪನಾಡು ಭಾಗಗಳಲ್ಲಿ ತಂತುರು ಮಳೆಯಾಗಿದೆ. ಬೆಳ್ತಂಗಡಿ ತಾಲ್ಲೂಕಿನ ನಾರಾವಿ, ಮರೋಡಿಯಲ್ಲಿ ಸಾಧಾರಣ ಮಳೆ ಸುರಿದಿದೆ.</p>.<p>ಪುತ್ತೂರು ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಗುರುವಾರ ತಡರಾತ್ರಿ ಸಾಧಾರಣ, ಈಶ್ವರಮಂಗಲ ಸುತ್ತಮುತ್ತ ರಾತ್ರಿ ಮತ್ತು ಶುಕ್ರವಾರ ನಸುಕಿನಲ್ಲಿ ಬಿರುಸಿನ ಮಳೆಯಾಗಿದೆ.</p>.<p>ಹಲವು ಕಡೆಗಳಲ್ಲಿ ಮನೆಯಂಗಳದಲ್ಲಿ ಒಣಗಲು ಹಾಕಿದ ಅಡಿಕೆ ಒದ್ದೆಯಾಗಿದೆ. ನೆರೆಯ ಕೇರಳದ ಕಾಸರಗೋಡು ಜಿಲ್ಲೆಯ ಹಲವು ಭಾಗಗಳಲ್ಲಿ ಸುರಿದ ಮಳೆ ತಂಪೆರೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಮಳೆಯಾಗಿದೆ. ಮುಂಜಾನೆ 6 ಗಂಟೆಯ ವೇಳೆ ಗುಡುಗಿನಿಂದೊಡಗೂಡಿದ ಮಳೆ ಆರಂಭವಾಗಿದೆ. ಮಂಗಳೂರು ನಗರ ಸೇರಿದಂತೆ ಅನೇಕ ಭಾಗಗಳಲ್ಲಿ ತುಂತುರು ಹನಿ ಬಿದ್ದಿದ್ದು ಉಳ್ಳಾಲ, ಬಂಟ್ವಾಳ ಮತ್ತು ಪುತ್ತೂರು ತಾಲ್ಲೂಕುಗಳ ಕೆಲವೆಡೆ ಜೋರು ಮಳೆಯಾಗಿದೆ. ಜಿಲ್ಲೆಯಾದ್ಯಂತ ಒಮ್ಮೆ ಬಿಸಿಲು ಮತ್ತೊಮ್ಮೆ ಮೋಡ ಕವಿದ ವಾತಾವರಣ ಇತ್ತು.</p>.<p>ಉಳ್ಳಾಲ ತಾಲ್ಲೂಕಿನ ವ್ಯಾಪ್ತಿಯ ತಲಪಾಡಿ, ಕೋಟೆಕಾರು, ಬೀರಿ, ದೇರಳಕಟ್ಟೆ, ಕುತ್ತಾರು, ತೊಕ್ಕೊಟ್ಟು ಭಾಗದಲ್ಲಿ ಮಳೆಯಾಗಿದೆ. ಮೂಲ್ಕಿ ತಾಲ್ಲೂಕಿನ ಹಳೆಯಂಗಡಿ, ಕಾರ್ನಾಡು, ಬಪ್ಪನಾಡು ಭಾಗಗಳಲ್ಲಿ ತಂತುರು ಮಳೆಯಾಗಿದೆ. ಬೆಳ್ತಂಗಡಿ ತಾಲ್ಲೂಕಿನ ನಾರಾವಿ, ಮರೋಡಿಯಲ್ಲಿ ಸಾಧಾರಣ ಮಳೆ ಸುರಿದಿದೆ.</p>.<p>ಪುತ್ತೂರು ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಗುರುವಾರ ತಡರಾತ್ರಿ ಸಾಧಾರಣ, ಈಶ್ವರಮಂಗಲ ಸುತ್ತಮುತ್ತ ರಾತ್ರಿ ಮತ್ತು ಶುಕ್ರವಾರ ನಸುಕಿನಲ್ಲಿ ಬಿರುಸಿನ ಮಳೆಯಾಗಿದೆ.</p>.<p>ಹಲವು ಕಡೆಗಳಲ್ಲಿ ಮನೆಯಂಗಳದಲ್ಲಿ ಒಣಗಲು ಹಾಕಿದ ಅಡಿಕೆ ಒದ್ದೆಯಾಗಿದೆ. ನೆರೆಯ ಕೇರಳದ ಕಾಸರಗೋಡು ಜಿಲ್ಲೆಯ ಹಲವು ಭಾಗಗಳಲ್ಲಿ ಸುರಿದ ಮಳೆ ತಂಪೆರೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>