ಸುಬ್ರಹ್ಮಣ್ಯ ವರದಿ: ಇಲ್ಲಿನ ಕಲ್ಲುಗುಡ್ಡೆ ಪರಿಸರದಲ್ಲಿ ಶನಿವಾರ ತಡರಾತ್ರಿ ಹಾಗೂ ಭಾನುವಾರವೂ ಧಾರಾಕಾರ ಮಳೆಯಾಗಿದೆ. ಹಳ್ಳ, ತೋಡುಗಳು ತುಂಬಿ ಹರಿದು ಕೃಷಿ ಭೂಮಿಗೂ ನೀರು ನುಗ್ಗಿದೆ. ಸುಬ್ರಹ್ಮಣ್ಯ, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಐನೆಕಿದು, ಯೇನೆಕಲ್ಲು, ಬಳ್ಪ, ಪಂಜ, ಕೈಕಂಬ, ಬಿಳಿನೆಲೆ, ಕಲ್ಲುಗುಡ್ಡೆ, ನೂಜಿಬಾಳ್ತಿಲ, ಇಚ್ಲಂಪಾಡಿ, ಕೊಣಾಜೆ ವ್ಯಾಪ್ತಿಯಲ್ಲಿ ಮಳೆಯಾಗಿದೆ.