ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿನಲ್ಲಿ ಧಾರಾಕಾರ ಮಳೆ | ರಸ್ತೆ ಮೂಲಕ ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ

Last Updated 26 ಜುಲೈ 2019, 4:29 IST
ಅಕ್ಷರ ಗಾತ್ರ

ಮಂಗಳೂರು: ಗುರುವಾರ ಸ್ವಲ್ಪ‌ವಿರಾಮ ಪಡೆದಿದ್ದ ಮಳೆ, ಶುಕ್ರವಾರ ಮತ್ತೆ ಬಿರುಸುಗೊಂಡಿದ್ದು, ಬೆಳಿಗ್ಗೆಯಿಂದಲೇ‌ ಧಾರಾಕಾರವಾಗಿ ಸುರಿಯುತ್ತಿದೆ. ಮಳೆ ಕಾರಣ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ರಸ್ತೆ ಮೂಲಕ ಕೊಲ್ಲೂರಿಗೆ ತೆರಳಿದ್ದಾರೆ.

ನಗರದ‌ ಹಲವೆಡೆ ನೀರು ತುಂಬಿಕೊಂಡಿದ್ದು, ಜನರು ಓಡಾಡಲು ತೊಂದರೆ ಅನುಭವಿಸುವಂತಾಗಿದೆ. ನಗರದ ಸೆಂಟ್ರಲ್‌ ರೈಲು ನಿಲ್ದಾಣದ ಆವರಣದಲ್ಲಿ ನೀರು ತುಂಬಿಕೊಂಡಿದ್ದು,‌ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ. ‌ಪಾರ್ಕಿಂಗ್‌ ಸ್ಥಳವು ಸಂಪೂರ್ಣ ಜಲಾವೃತಗೊಂಡಿದೆ.

ರಸ್ತೆ ಮೂಲಕ ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ

ಕೊಲ್ಲೂರು ದೇವಸ್ಥಾನ ಭೇಟಿ ನೀಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಶುಕ್ರವಾರ ಬೆಳಿಗ್ಗೆ 8.40 ಗಂಟೆಗೆ ಬಂದರು.

ಅವರು ಇಲ್ಲಿಂದ ಹೆಲಿಕಾಪ್ಟರ್ ಮೂಲಕ ಕೊಲ್ಲೂರಿಗೆ ತೆರಳಬೇಕಾಗಿತ್ತು. ಆದರೆ, ತೀವ್ರ ಮಳೆಯ ಕಾರಣ, ಅವರು ರಸ್ತೆ ಮೂಲಕ ಇದೀಗ ಕೊಲ್ಲೂರಿಗೆ ತೆರಳಿದ್ದಾರೆ.ರಸ್ತೆಯುದ್ದಕ್ಕೂ ತೀವ್ರ ಭದ್ರತೆ ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT