ಮಂಗಳೂರು: ನಗರದಲ್ಲಿ ಸೋಮವಾರ ಮುಂಜಾನೆ ಗುಡುಗು ಸಿಡಿಲು ಗಾಳಿ ಸಹಿತ ಮಳೆ ಸುರಿಯಿತು. ಬೆಳಿಗ್ಗೆ 5.40 ಸುಮಾರಿಗೆ ಆರಂಭಗೊಂಡ ಮಳೆ 8.30ರ ತನಕವೂ ಸುರಿಯುತ್ತಿತ್ತು.ಬಿಸಿಲಿನ ಝಳದಿಂದ ಬಸವಳಿದ ಜನರಿಗೆ ತಂಪು ನೀಡಿತು.
ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನರಿಗೆ ತೊಂದರೆಯಾಯಿತು. ಮೋಡಗಳು ದಟ್ಟೈಸಿದ್ದ ಕಾರಣ ಬೆಳಕು ಮಬ್ಬಾಗಿತ್ತು. ವಾಹನಗಳು ಹೆಡ್ಲೈಟ್ ಹಾಕಿಕೊಂಡೇ ಸಂಚರಿಸಿದವು.ಜಿಲ್ಲೆಯಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಯುವನೊಬ್ಬ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಮೃತನನ್ನು ಭರತ್ ಎಂದು ಗುರುತಿಸಲಾಗಿದೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ ಆತ ಚಿಕಿತ್ಸೆಗೆ ಸ್ಪಂದಿಸಲಿಲ್ಲ.