ಸ್ಥಳೀಯ ಕಟ್ಟಡದ ಮಾಲೀಕರೊಬ್ಬರು ಹೆದ್ದಾರಿ ಬದಿ ತೋಡಿಗೆ ಅಕ್ರಮವಾಗಿ ಮಣ್ಣು ತುಂಬಿ ಸರ್ಕಾರಿ ಜಮೀನು ಅತಿಕ್ರಮಣಗೊಳಿಸಿದ ಪರಿಣಾಮ ಕೃತಕ ನೆರೆ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಯಂತ್ರೋಪಕರಣ ಹಾನಿಗೀಡಾದ ಸಂಸ್ಥೆಯ ಮಾಲೀಕ ನವೀನ್ ಕೋಟ್ಯಾನ್ ಅವರು ಹೆದ್ದಾರಿ ಇಲಾಖೆ ಮತ್ತು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಹೆದ್ದಾರಿ ಇಲಾಖೆ ಎಂಜಿನಿಯರ್ ಮಯಾಂಕ್ ಮಿಶ್ರಾ ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ರಸ್ತೆ ಅತಿಕ್ರಮಣ ಬಗ್ಗೆ ಪರಿಶೀಲಿಸಿದರು. ಹಿಟಾಚಿ ಮೂಲಕ ಮಣ್ಣು ತೆರವುಗೊಳಿಸಲಾಯಿತು.