<p><strong>ಮಂಗಳೂರು:</strong> ‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲು ಸುಮಾರು ಮೂರುವರೆ ವರ್ಷ ಬೇಕಾಗಬಹುದು’ ಎಂದು ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಟ್ರಸ್ಟ್ನ ಟ್ರಸ್ಟಿಯೂ ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಂದಿರದ ಅಡಿಪಾಯದ ಜಾಗವನ್ನು ವಿಸ್ತರಿಸಲು ಟ್ರಸ್ಟ್ ನಿರ್ಧರಿಸಿದೆ. ಮಂದಿರದ ಜೊತೆಗೆ ಆ ಪ್ರದೇಶದ ಸಾಂಸ್ಕೃತಿಕ ಪುನರುತ್ಥಾನ ಕಾಮಗಾರಿಯನ್ನೂ ಕೈಗೊಳ್ಳಲಾಗುತ್ತದೆ’ ಎಂದರು.</p>.<p>ರಾಮನವಮಿಯಂದು ರಾಮನ ವಿಗ್ರಹದ ಮೇಲೆ ಸೂರ್ಯನ ಕಿರಣ ಬೀಳುವಂತೆ ರಾಮ ಮಂದಿರ ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಈ ರೀತಿಯ ವಿನ್ಯಾಸ ರೂಪಿಸಲು ಕೌನ್ಸಿಲ್ ಆಫ್ ಸೈಂಟಿಫಿಕ್ ಆಂಡ್ ಇಂಡಸ್ಟ್ರಿಯ<br />ಲ್ ರಿಸರ್ಚ್ (ಸಿಎಸ್ಐಆರ್) ಸಂಸ್ಥೆಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.</p>.<p>‘ರಾಮನ ವಿಗ್ರಹದ ಎದುರು ಪೂಜೆ ಸಲ್ಲಿಸುವ ಭಕ್ತಾದಿಗಳು 3 ಡಿ ಅನುಭವ ಪಡೆಯುವಂತಾಗಬೇಕು ಎಂಬುದು ಪ್ರಧಾನಿಯ ಆಶಯವಾಗಿದೆ. ಈ ಕಾರ್ಯವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ವಹಿಸಲಾಗಿದೆ’ ಎಂದರು.</p>.<p>‘ಸುಮಾರು 200 ಅಡಿ ಆಳದವರೆಗೆ ತೆಗ್ಗು ಮಾಡಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂಮಿಯ ಧಾರಣಾ ಶಕ್ತಿಯ ಪರೀಕ್ಷೆಯನ್ನು ಮಾಡಲಾಗಿದೆ’ ಎಂದರು.</p>.<p>‘ಹಳೆಯ ಕಟ್ಟಡಗಳನ್ನು ತೆರವುಗೊಳಿಸಿದ್ದು, ಭೂಮಿಯ ಸಮತಟ್ಟು ಮಾಡುವ ಕೆಲಸವನ್ನು ಕೈಗೊಳ್ಳಲಾಗಿದೆ. ಮಂದಿರ ನಿರ್ಮಾಣ ಕಾಮಗಾರಿಯನ್ನು ಎಲ್ ಆಂಡ್ ಟಿ ಹಾಗೂ ಟಾಟಾ ಕಂಪನಿಗಳು ಜಂಟಿಯಾಗಿ ನಿರ್ವಹಿಸಲಿವೆ’ ಎಂದು ತಿಳಿಸಿದರು.</p>.<p>‘ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ವೇದ ಶಿಲ್ಪಕಲಾವಿದರ ತಂಡ ರಚಿಸಲು ನಿರ್ಧರಿಸಲಾಗಿದೆ. ಈ ತಂಡಕ್ಕೆ ನಮ್ಮ ಭಾಗದಿಂದ ಕೃಷ್ಣರಾಜ ತಂತ್ರಿ ಹಾಗೂ ಗುಂಡಿಬೈಲ್ ಸುಬ್ರಹ್ಮಣ್ಯ ಭಟ್ ಅವರ ಹೆಸರು ಸೂಚಿಸಲಾಗಿದೆ’ ಎಂದರು.</p>.<p>‘ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹವನ್ನು ಜನವರಿ 15 ರಿಂದ ಆರಂಭಿಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲು ಸುಮಾರು ಮೂರುವರೆ ವರ್ಷ ಬೇಕಾಗಬಹುದು’ ಎಂದು ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಟ್ರಸ್ಟ್ನ ಟ್ರಸ್ಟಿಯೂ ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಂದಿರದ ಅಡಿಪಾಯದ ಜಾಗವನ್ನು ವಿಸ್ತರಿಸಲು ಟ್ರಸ್ಟ್ ನಿರ್ಧರಿಸಿದೆ. ಮಂದಿರದ ಜೊತೆಗೆ ಆ ಪ್ರದೇಶದ ಸಾಂಸ್ಕೃತಿಕ ಪುನರುತ್ಥಾನ ಕಾಮಗಾರಿಯನ್ನೂ ಕೈಗೊಳ್ಳಲಾಗುತ್ತದೆ’ ಎಂದರು.</p>.<p>ರಾಮನವಮಿಯಂದು ರಾಮನ ವಿಗ್ರಹದ ಮೇಲೆ ಸೂರ್ಯನ ಕಿರಣ ಬೀಳುವಂತೆ ರಾಮ ಮಂದಿರ ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಈ ರೀತಿಯ ವಿನ್ಯಾಸ ರೂಪಿಸಲು ಕೌನ್ಸಿಲ್ ಆಫ್ ಸೈಂಟಿಫಿಕ್ ಆಂಡ್ ಇಂಡಸ್ಟ್ರಿಯ<br />ಲ್ ರಿಸರ್ಚ್ (ಸಿಎಸ್ಐಆರ್) ಸಂಸ್ಥೆಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.</p>.<p>‘ರಾಮನ ವಿಗ್ರಹದ ಎದುರು ಪೂಜೆ ಸಲ್ಲಿಸುವ ಭಕ್ತಾದಿಗಳು 3 ಡಿ ಅನುಭವ ಪಡೆಯುವಂತಾಗಬೇಕು ಎಂಬುದು ಪ್ರಧಾನಿಯ ಆಶಯವಾಗಿದೆ. ಈ ಕಾರ್ಯವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ವಹಿಸಲಾಗಿದೆ’ ಎಂದರು.</p>.<p>‘ಸುಮಾರು 200 ಅಡಿ ಆಳದವರೆಗೆ ತೆಗ್ಗು ಮಾಡಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂಮಿಯ ಧಾರಣಾ ಶಕ್ತಿಯ ಪರೀಕ್ಷೆಯನ್ನು ಮಾಡಲಾಗಿದೆ’ ಎಂದರು.</p>.<p>‘ಹಳೆಯ ಕಟ್ಟಡಗಳನ್ನು ತೆರವುಗೊಳಿಸಿದ್ದು, ಭೂಮಿಯ ಸಮತಟ್ಟು ಮಾಡುವ ಕೆಲಸವನ್ನು ಕೈಗೊಳ್ಳಲಾಗಿದೆ. ಮಂದಿರ ನಿರ್ಮಾಣ ಕಾಮಗಾರಿಯನ್ನು ಎಲ್ ಆಂಡ್ ಟಿ ಹಾಗೂ ಟಾಟಾ ಕಂಪನಿಗಳು ಜಂಟಿಯಾಗಿ ನಿರ್ವಹಿಸಲಿವೆ’ ಎಂದು ತಿಳಿಸಿದರು.</p>.<p>‘ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ವೇದ ಶಿಲ್ಪಕಲಾವಿದರ ತಂಡ ರಚಿಸಲು ನಿರ್ಧರಿಸಲಾಗಿದೆ. ಈ ತಂಡಕ್ಕೆ ನಮ್ಮ ಭಾಗದಿಂದ ಕೃಷ್ಣರಾಜ ತಂತ್ರಿ ಹಾಗೂ ಗುಂಡಿಬೈಲ್ ಸುಬ್ರಹ್ಮಣ್ಯ ಭಟ್ ಅವರ ಹೆಸರು ಸೂಚಿಸಲಾಗಿದೆ’ ಎಂದರು.</p>.<p>‘ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹವನ್ನು ಜನವರಿ 15 ರಿಂದ ಆರಂಭಿಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>