ಉಜಿರೆ: ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿರುವ ಶ್ರೀ ರಾಮಕ್ಷೇತ್ರದಲ್ಲಿ ಭಾನುವಾರ 59ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ಚಂಡೀಘಡದ ಮುಕ್ತನಾಥ ಸ್ವಾಮೀಜಿ ಶ್ರೀ ರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಶಾಸಕ ಹರೀಶ್ ಪೂಂಜ, ಹಿರಿಯ ವಕೀಲ ಕೆ. ಪ್ರತಾಪಸಿಂಹ ನಾಯಕ್, ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜಿತಾ ವಿ. ಬಂಗೇರ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದನ್ ಪ್ರಸಾದ್ ಕಾಮತ್, ಪ್ರಭಾಕರ ಧರ್ಮಸ್ಥಳ, ರವಿ ಬರೆಮೇಲು ಉಪಸ್ಥಿತರಿದ್ದರು.