ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಲವು ನಾನು ಟಿಕೆಟ್ ವಂಚಿತನಾಗಿದ್ದೇನೆ. 2007ರಲ್ಲಿ ದೆಹಲಿಯಲ್ಲಿ ನಡೆದ ಬಿಜೆಪಿ ಮೀನುಗಾರರ ಸಮಾವೇಶದಲ್ಲಿ, ಮೀನುಗಾರರಿಗೆ ಒಂದು ಕಡೆ ಟಿಕೆಟ್ ನೀಡುವಂತೆ ವಿನಂತಿಸಿದ್ದಾರೆ. ಪಕ್ಷದ ಆಗಿನ ರಾಷ್ಟ್ರೀಯ ಅಧ್ಯಕ್ಷ ಕುಸಬಾವು ಠಾಕ್ರೆ ಇದಕ್ಕೆ ಸ್ಪಂದಿಸಿ 2008ರ ಚುನಾವಣೆ ವೇಳೆಗೆ ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಮೀನುಗಾರರಿಗೆ ಟಿಕೆಟ್ ನೀಡುವುದಾಗಿ ಘೋಷಿಸಿದ್ದರು. ವಿ.ಎಸ್. ಆಚಾರ್ಯ ಅವರು ನನಗೆ ಸ್ಪರ್ಧಿಸಲು ಅವಕಾಶ ನೀಡಿದ್ದರೂ, ಕಾಂಗ್ರೆಸ್ನಿಂದ ಬಂದ ಮನೋರಮಾ ಮಧ್ವರಾಜ್ ಸ್ಪರ್ಧಿಸಿ ಗೆಲುವು ಸಾಧಿಸಿದರು. ಈ ಬಾರಿಯಾದರೂ ನನಗೆ ಟಿಕೆಟ್ ನೀಡುವಂತೆ ವಿನಂತಿಸಿದ್ದೇನೆ’ ಎಂದರು.