ಮಾಜಿ ಯೋಧ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ‘ಸ್ವಾತಂತ್ರ್ಯದ ತರುವಾಯ ಭಾರತ ವಿಜ್ಞಾನ-ತಂತ್ರಜ್ಞಾನ, ಶಿಕ್ಷಣ, ರಕ್ಷಣೆ, ಆಹಾರ ಉತ್ಪಾದನೆ ಹೀಗೆ ಅನೇಕ ಸಾಧನೆಗಳನ್ನು ಮಾಡಿರುವುದು ಎಲ್ಲರಿಗೂ ಹೆಮ್ಮೆ ತರುವ ವಿಚಾರ. ಎಪ್ಪತ್ತೈದು ವರ್ಷಗಳ ಸ್ವಾತಂತ್ರೋತ್ಸದ ವೇಳೆ ಮುಂದಿನ 25 ವರ್ಷಗಳಲ್ಲಿ ಸಾಗಬೇಕಾದ ಹಾದಿಯ ಬಗ್ಗೆ ಯೋಚಿಸಬೇಕಿದೆ. ಸಣ್ಣತನ, ಅಸೂಯೆ, ದ್ವೇಷ, ಹಿಂಸೆ ಇಂತಹ ಕ್ಷುಲ್ಲಕ ವಿಚಾರಗಳನ್ನು ಬಿಟ್ಟು ಉನ್ನತ ವಿಚಾರದತ್ತ ಸಾಗಬೇಕಾಗಿದೆ’ ಎಂದರು.