<p><strong>ಮಂಗಳೂರು:</strong> ಜಲ್ಲಿಗುಡ್ಡೆಯ ಸ್ವಸ್ತಿಕ್ ಕಲಾ ಕೇಂದ್ರವು ದಿ.ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಸಹಕಾರದಲ್ಲಿ ನೀಡುವ 2024–25ನೇ ಸಾಲಿನ ಬಾಬು ಕುಡ್ತಡ್ಕ ಪ್ರಶಸ್ತಿಗೆ ಯಕ್ಷಗಾನದ ಸ್ತ್ರೀ ವೇಷಧಾರಿ, ಪ್ರಸಂಗ ಕರ್ತೃ ಎಂ.ಕೆ. ರಮೇಶ ಆಚಾರ್ಯ ಆಯ್ಕೆಯಾಗಿದ್ದಾರೆ.</p>.<p>ಪ್ರಶಸ್ತಿಯು ₹10 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ. ಸೆ.29ರಂದು ಸಂಜೆ 4 ಗಂಟೆಗೆ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ವಸ್ತಿಕ್ ಕಲಾ ಕೇಂದ್ರದ ಕಾರ್ಯದರ್ಶಿ ಕೆ.ಸಿ. ಹರೀಶ್ಚಂದ್ರ ರಾವ್ ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ನಂತರ ಬಿಕರ್ನಕಟ್ಟೆಯ ಪ್ರಮೀತ ಕಲಾವಿದರು, ಚಂದ್ರಶೇಖರ ಕರ್ಕೇರ ರಚಿಸಿರುವ, ವಸಂತ್ ಅಮೀನ್ ನಿರ್ದೇಶನದ ‘ಎಂಚಿತ್ತಿನಾಯೆ ಎಂಚಾಯೆ’ ಎಂಬ ತುಳು ಪರದೆ ನಾಟಕ ಪ್ರದರ್ಶಿಸುವರು ಎಂದರು. </p>.<p>ಸಂಸ್ಥೆಯ ಅಧ್ಯಕ್ಷ ಅಶೋಕ್ ಜಾಧವ್, ಗೌರವಾಧ್ಯಕ್ಷ ಬಿ.ಪ್ರಕಾಶ್ ಪೈ, ಪ್ರಮುಖರಾದ ಉಷಾಕುಮಾರಿ, ಚಂದ್ರಕಲಾ, ಉಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಜಲ್ಲಿಗುಡ್ಡೆಯ ಸ್ವಸ್ತಿಕ್ ಕಲಾ ಕೇಂದ್ರವು ದಿ.ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಸಹಕಾರದಲ್ಲಿ ನೀಡುವ 2024–25ನೇ ಸಾಲಿನ ಬಾಬು ಕುಡ್ತಡ್ಕ ಪ್ರಶಸ್ತಿಗೆ ಯಕ್ಷಗಾನದ ಸ್ತ್ರೀ ವೇಷಧಾರಿ, ಪ್ರಸಂಗ ಕರ್ತೃ ಎಂ.ಕೆ. ರಮೇಶ ಆಚಾರ್ಯ ಆಯ್ಕೆಯಾಗಿದ್ದಾರೆ.</p>.<p>ಪ್ರಶಸ್ತಿಯು ₹10 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ. ಸೆ.29ರಂದು ಸಂಜೆ 4 ಗಂಟೆಗೆ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ವಸ್ತಿಕ್ ಕಲಾ ಕೇಂದ್ರದ ಕಾರ್ಯದರ್ಶಿ ಕೆ.ಸಿ. ಹರೀಶ್ಚಂದ್ರ ರಾವ್ ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ನಂತರ ಬಿಕರ್ನಕಟ್ಟೆಯ ಪ್ರಮೀತ ಕಲಾವಿದರು, ಚಂದ್ರಶೇಖರ ಕರ್ಕೇರ ರಚಿಸಿರುವ, ವಸಂತ್ ಅಮೀನ್ ನಿರ್ದೇಶನದ ‘ಎಂಚಿತ್ತಿನಾಯೆ ಎಂಚಾಯೆ’ ಎಂಬ ತುಳು ಪರದೆ ನಾಟಕ ಪ್ರದರ್ಶಿಸುವರು ಎಂದರು. </p>.<p>ಸಂಸ್ಥೆಯ ಅಧ್ಯಕ್ಷ ಅಶೋಕ್ ಜಾಧವ್, ಗೌರವಾಧ್ಯಕ್ಷ ಬಿ.ಪ್ರಕಾಶ್ ಪೈ, ಪ್ರಮುಖರಾದ ಉಷಾಕುಮಾರಿ, ಚಂದ್ರಕಲಾ, ಉಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>