ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆ ಸಮಿತಿಯು ಈ ವಾರ್ಷಿಕ ಪ್ರಶಸ್ತಿಗೆ ರಮೇಶ ಭಟ್ ಅವರನ್ನು ಆಯ್ಕೆ ಮಾಡಿದೆ. 1985ರಿಂದ ಇಲ್ಲಿಯವರೆಗೆ ಸುಮಾರು 35 ವರ್ಷಗಳಿಂದ ಅವರು ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಲ್ಲಿ ಪಾತ್ರ ಮಾಡುತ್ತಿದ್ದಾರೆ. ‘ದೇವಿ ಮಹಾತ್ಮೆ’ ಪ್ರಸಂಗದ ಶ್ರೀದೇವಿ ಪಾತ್ರಕ್ಕೆ ಅವರು ಪ್ರಸಿದ್ಧರು. ರಮೇಶ್ ಭಟ್ಟರ ಸೀತೆ, ದಮಯಂತಿ, ಕಯಾದು, ಮೋಹಿನಿ, ದ್ರೌಪದಿ, ಮೀನಾಕ್ಷಿ, ಶಶಿಪ್ರಭೆ, ಯಶೋಮತಿ ಮೊದಲಾದ ಸ್ತ್ರೀ ಭೂಮಿಕೆಗಳು ಜನಪ್ರಿಯವಾಗಿವೆ.