ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೆಳೆಯರ ಸಹಭಾಗಿತ್ವದಲ್ಲಿ ನಡೆಯುವ ಆರನೇ ವರ್ಷದ ಕಾರ್ಯಕ್ರಮ ಇದಾಗಿತ್ತು. ತೆರೆದ ಮೈದಾನದಲ್ಲಿ ನಡೆದ ಈ ಹೋಳಿಯಲ್ಲಿ ರಾಜ್ಯದ ವಿವಿಧೆಡೆಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಕುಟುಂಬ ಸಮೇತರಾಗಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಸಾಂಪ್ರದಾಯಿಕ ಹೋಳಿಯನ್ನು ಸ್ವಲ್ಪ ಮನರಂಜನಾತ್ಮಕವಾಗಿ ಆಯೋಜಿಸಿದ್ದೇವೆಯೇ ವಿನಾ ಇಲ್ಲಿ ಅಕ್ರಮ ಅಥವಾ ಅನೈತಿಕತೆಗೆ ಅವಕಾಶ ಇರಲಿಲ್ಲ. ನೋಂದಣಿ ಮಾಡಿಕೊಂಡು ಭಾಗವಹಿಸಲು ಅವಕಾಶ ನೀಡಲಾಗಿತ್ತು. ಆನ್ಲೈನ್ನಲ್ಲಿ ಟಿಕೆಟ್ಗಳು ಮಾರಾಟವಾಗಿದ್ದವು. ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಸಾಕಷ್ಟು ಪ್ರಚಾರವನ್ನೂ ನೀಡಲಾಗಿತ್ತು. ಹೀಗಿದ್ದಾಗಲೂ ಯಾವುದೋ ಸಂಘಟನೆಯವರು ಎನ್ನಲಾದ ಕಿಡಿಗೇಡಿಗಳು ದಾಳಿ ನಡೆಸಿದ್ದರ ಅರ್ಥವೇನು’ ಎಂದು ಪ್ರಶ್ನಿಸಿದರು.