<p><strong>ಮಂಗಳೂರು:</strong> ಭಾರತೀಯ ಪರಂಪರೆಯಲ್ಲಿ ಶಸ್ತ್ರ ಮತ್ತು ಶಾಸ್ತ್ರಗಳಲ್ಲಿ ಮಹಿಳೆಯರಿಗೆ ಬಹುಮುಖ್ಯ ಪಾತ್ರವಿತ್ತು ಎಂಬುದು ರಾಣಿ ಅಬ್ಬಕ್ಕರ ಹೋರಾಟ ಮತ್ತು ಅಕ್ಕಮಹಾದೇವಿ ಸಾಹಿತ್ಯದ ಮೂಲಕ ಅರಿವಿಗೆ ಬರುತ್ತದೆ ಎಂದು ಮಾಜಿ ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದರು.</p>.<p>ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ (ಕೆಆರ್ಎಂಎಸ್ಎಸ್) ಮಂಗಳೂರು ವಿಭಾಗ ಮತ್ತು ಕೆನರಾ ಕಾಲೇಜಿನ ಐಕ್ಯುಎಸಿ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ ಬುಧವಾರ ಇಲ್ಲಿ ನಡೆದ ಅಬ್ಬಕ್ಕ@ 500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ- ‘ಎಸಳು 75’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕ ರಾಷ್ಟ್ರ ಧರ್ಮವನ್ನು ಎತ್ತಿ ಹಿಡಿದವರು. ಅವರು ಗೆರಿಲ್ಲಾ ಮಾದರಿಯ ಹೋರಾಟ ಸಂಘಟಿಸಿದವರು. ತುಳುನಾಡಿನ ಸಂಸ್ಕೃತಿ, ಪರಂಪರೆ ರಕ್ಷಣೆಗೆ ಒತ್ತು ನೀಡಿದವರು. ಆದರೆ ಅವರಿಗೆ ಸೂಕ್ತ ಮನ್ನಣೆ ಸಿಕ್ಕಿಲ್ಲ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕೆನರಾ ಕಾಲೇಜಿನ ಸಂಚಾಲಕ ಜಗನ್ನಾಥ ಕಾಮತ್ ಮಾತನಾಡಿ, ಅಬ್ಬಕ್ಕ ಅವರಂತಹ ಹೋರಾಗಾರ್ತಿಯರ ತ್ಯಾಗ, ಹೋರಾಟ, ದೇಶಪ್ರೇಮದ ಮೌಲ್ಯಗಳನ್ನು ವಿದ್ಯಾರ್ಥಿ ಸಮುದಾಯಕ್ಕೆ ತಿಳಿಸುವ ಕಾರ್ಯ ಇಂದಿನ ಅಗತ್ಯವಾಗಿದೆ ಎಂದರು.</p>.<p>ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಅಷ್ಟಾವಧಾನ ನಡೆಸಿಕೊಟ್ಟರು. ಕೆಆರ್ಎಂಎಸ್ಎಸ್ ಸಂಘಟನಾ ಕಾರ್ಯದರ್ಶಿ ಸಿ.ವಿ.ಮರಿದೇವರ ಮಠ, ಕೆನರಾ ಕಾಲೇಜಿನ ವ್ಯವಸ್ಥಾಪಕ ಶಿವಾನಂದ ಶೆಣೈ, ಪ್ರಾಂಶುಪಾಲೆ ಪ್ರೇಮಲತಾ ವಿ., ಆಡಳಿತಾಧಿಕಾರಿ ದೀಪ್ತಿ ನಾಯಕ್ ಉಪಸ್ಥಿತರಿದ್ದರು.</p>.<p>ಮಾಧವ ಎಂ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿ ಯು.ಎಸ್. ಕಾರ್ಯಕ್ರಮ ನಿರೂಪಿಸಿದರು. ಶೈಲಜಾ ಪಿ. ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಭಾರತೀಯ ಪರಂಪರೆಯಲ್ಲಿ ಶಸ್ತ್ರ ಮತ್ತು ಶಾಸ್ತ್ರಗಳಲ್ಲಿ ಮಹಿಳೆಯರಿಗೆ ಬಹುಮುಖ್ಯ ಪಾತ್ರವಿತ್ತು ಎಂಬುದು ರಾಣಿ ಅಬ್ಬಕ್ಕರ ಹೋರಾಟ ಮತ್ತು ಅಕ್ಕಮಹಾದೇವಿ ಸಾಹಿತ್ಯದ ಮೂಲಕ ಅರಿವಿಗೆ ಬರುತ್ತದೆ ಎಂದು ಮಾಜಿ ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದರು.</p>.<p>ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ (ಕೆಆರ್ಎಂಎಸ್ಎಸ್) ಮಂಗಳೂರು ವಿಭಾಗ ಮತ್ತು ಕೆನರಾ ಕಾಲೇಜಿನ ಐಕ್ಯುಎಸಿ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ ಬುಧವಾರ ಇಲ್ಲಿ ನಡೆದ ಅಬ್ಬಕ್ಕ@ 500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ- ‘ಎಸಳು 75’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕ ರಾಷ್ಟ್ರ ಧರ್ಮವನ್ನು ಎತ್ತಿ ಹಿಡಿದವರು. ಅವರು ಗೆರಿಲ್ಲಾ ಮಾದರಿಯ ಹೋರಾಟ ಸಂಘಟಿಸಿದವರು. ತುಳುನಾಡಿನ ಸಂಸ್ಕೃತಿ, ಪರಂಪರೆ ರಕ್ಷಣೆಗೆ ಒತ್ತು ನೀಡಿದವರು. ಆದರೆ ಅವರಿಗೆ ಸೂಕ್ತ ಮನ್ನಣೆ ಸಿಕ್ಕಿಲ್ಲ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕೆನರಾ ಕಾಲೇಜಿನ ಸಂಚಾಲಕ ಜಗನ್ನಾಥ ಕಾಮತ್ ಮಾತನಾಡಿ, ಅಬ್ಬಕ್ಕ ಅವರಂತಹ ಹೋರಾಗಾರ್ತಿಯರ ತ್ಯಾಗ, ಹೋರಾಟ, ದೇಶಪ್ರೇಮದ ಮೌಲ್ಯಗಳನ್ನು ವಿದ್ಯಾರ್ಥಿ ಸಮುದಾಯಕ್ಕೆ ತಿಳಿಸುವ ಕಾರ್ಯ ಇಂದಿನ ಅಗತ್ಯವಾಗಿದೆ ಎಂದರು.</p>.<p>ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಅಷ್ಟಾವಧಾನ ನಡೆಸಿಕೊಟ್ಟರು. ಕೆಆರ್ಎಂಎಸ್ಎಸ್ ಸಂಘಟನಾ ಕಾರ್ಯದರ್ಶಿ ಸಿ.ವಿ.ಮರಿದೇವರ ಮಠ, ಕೆನರಾ ಕಾಲೇಜಿನ ವ್ಯವಸ್ಥಾಪಕ ಶಿವಾನಂದ ಶೆಣೈ, ಪ್ರಾಂಶುಪಾಲೆ ಪ್ರೇಮಲತಾ ವಿ., ಆಡಳಿತಾಧಿಕಾರಿ ದೀಪ್ತಿ ನಾಯಕ್ ಉಪಸ್ಥಿತರಿದ್ದರು.</p>.<p>ಮಾಧವ ಎಂ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿ ಯು.ಎಸ್. ಕಾರ್ಯಕ್ರಮ ನಿರೂಪಿಸಿದರು. ಶೈಲಜಾ ಪಿ. ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>