<p><strong>ಮೂಡುಬಿದಿರೆ</strong>: ಪೋರ್ಚುಗೀಸರ ವಿರುದ್ಧ ಹೋರಾಡಿದ ಧೀರ ಮಹಿಳೆ ರಾಣಿ ಅಬ್ಬಕ್ಕ ಅವರ ಪರಿಚಯ ಯುವ ಜನತೆಗೆ ಆಗಬೇಕಿದೆ. ಅವರ ಇತಿಹಾಸವು ಪಠ್ಯಪುಸ್ತಕದಲ್ಲಿ ಬರಬೇಕು. ಈ ಸಂಬಂಧ ಶಿಕ್ಷಣ ಸಚಿವರಿಗೆ ಪತ್ರ ಬರೆಯುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಇಲ್ಲಿನ ಚೌಟರ ಅರಮನೆಯ ಮುಂಭಾಗದಲ್ಲಿ ಜವನೆರ್ ಬೆದ್ರ ಸಂಘಟನೆ ನಿರ್ಮಿಸಿ ಕಿರು ಉದ್ಯಾನದಲ್ಲಿ ರಾಣಿ ಅಬ್ಬಕ್ಕಳ ಪ್ರತಿಮೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ರಾಣಿ ಅಬ್ಬಕ್ಕಳ ಧೈರ್ಯ, ದೇಶಾಭಿಮಾನವು ಮಹಿಳೆಯರಿಗೆ ಸ್ಫೂರ್ತಿ ಎಂದರು.</p>.<p>ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭಾತ್ ಬಲ್ನಾಡ್ ರಾಣಿ ಅಬ್ಬಕ್ಕಳ ಇತಿಹಾಸವನ್ನು ತಿಳಿಸಿದರು.</p>.<p>ಮೂಡುಬಿದಿರೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕು. ಸರ್ಕಾರಿ ರಕ್ತನಿಧಿ ಕೇಂದ್ರವನ್ನು ಸ್ಥಾಪಿಸಬೇಕು. ರಾಣಿ ಅಬ್ಬಕ್ಕಳ ಸಂಶೋಧನಾ ಕೇಂದ್ರವನ್ನು ಆರಂಭಿಸಬೇಕು ಎಂಬ ಬೇಡಿಕೆ ಪತ್ರವನ್ನು ಜವನೆರ್ ಬೆದ್ರ ಸಂಘಟನೆಯ ಅಧ್ಯಕ್ಷ ಅಮರ್ಕೋಟೆ ಸಚಿವರಿಗೆ ನೀಡಿದರು.</p>.<p>ಪ್ರಮುಖರಾದ ಕೆ.ಅಭಯಚಂದ್ರ ಜೈನ್, ಮಿಥುನ್ ರೈ, ಸುದರ್ಶನ ಎಂ., ಕೆ.ಪಿ.ಜಗದೀಶ ಅಧಿಕಾರಿ, ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಮುಖ್ಯಾಧಿಕಾರಿ ಇಂದು ಎಂ., ಮೂಡಾ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್, ಚೌಟರ ಅರಮನೆಯ ಕುಲದೀಪ ಎಂ. ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ</strong>: ಪೋರ್ಚುಗೀಸರ ವಿರುದ್ಧ ಹೋರಾಡಿದ ಧೀರ ಮಹಿಳೆ ರಾಣಿ ಅಬ್ಬಕ್ಕ ಅವರ ಪರಿಚಯ ಯುವ ಜನತೆಗೆ ಆಗಬೇಕಿದೆ. ಅವರ ಇತಿಹಾಸವು ಪಠ್ಯಪುಸ್ತಕದಲ್ಲಿ ಬರಬೇಕು. ಈ ಸಂಬಂಧ ಶಿಕ್ಷಣ ಸಚಿವರಿಗೆ ಪತ್ರ ಬರೆಯುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಇಲ್ಲಿನ ಚೌಟರ ಅರಮನೆಯ ಮುಂಭಾಗದಲ್ಲಿ ಜವನೆರ್ ಬೆದ್ರ ಸಂಘಟನೆ ನಿರ್ಮಿಸಿ ಕಿರು ಉದ್ಯಾನದಲ್ಲಿ ರಾಣಿ ಅಬ್ಬಕ್ಕಳ ಪ್ರತಿಮೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ರಾಣಿ ಅಬ್ಬಕ್ಕಳ ಧೈರ್ಯ, ದೇಶಾಭಿಮಾನವು ಮಹಿಳೆಯರಿಗೆ ಸ್ಫೂರ್ತಿ ಎಂದರು.</p>.<p>ಜೈನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭಾತ್ ಬಲ್ನಾಡ್ ರಾಣಿ ಅಬ್ಬಕ್ಕಳ ಇತಿಹಾಸವನ್ನು ತಿಳಿಸಿದರು.</p>.<p>ಮೂಡುಬಿದಿರೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕು. ಸರ್ಕಾರಿ ರಕ್ತನಿಧಿ ಕೇಂದ್ರವನ್ನು ಸ್ಥಾಪಿಸಬೇಕು. ರಾಣಿ ಅಬ್ಬಕ್ಕಳ ಸಂಶೋಧನಾ ಕೇಂದ್ರವನ್ನು ಆರಂಭಿಸಬೇಕು ಎಂಬ ಬೇಡಿಕೆ ಪತ್ರವನ್ನು ಜವನೆರ್ ಬೆದ್ರ ಸಂಘಟನೆಯ ಅಧ್ಯಕ್ಷ ಅಮರ್ಕೋಟೆ ಸಚಿವರಿಗೆ ನೀಡಿದರು.</p>.<p>ಪ್ರಮುಖರಾದ ಕೆ.ಅಭಯಚಂದ್ರ ಜೈನ್, ಮಿಥುನ್ ರೈ, ಸುದರ್ಶನ ಎಂ., ಕೆ.ಪಿ.ಜಗದೀಶ ಅಧಿಕಾರಿ, ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಮುಖ್ಯಾಧಿಕಾರಿ ಇಂದು ಎಂ., ಮೂಡಾ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್, ಚೌಟರ ಅರಮನೆಯ ಕುಲದೀಪ ಎಂ. ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>