<p>ಮಂಗಳೂರು:ಗೆಳೆಯನ ಜೊತೆ ವಿಹಾರಕ್ಕೆ ಬಂದಿದ್ದ ಯುವತಿ ಮೇಲೆ ಸುರತ್ಕಲ್ನ ಎನ್ಐಟಿಕೆ ಸಮೀಪದ ಕಡಲ ಕಿನಾರೆಯಲ್ಲಿ ಯುವಕನೊಬ್ಬ ಅತ್ಯಾಚಾರ ನಡೆಸಿದ್ದಾಗಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಜುಲೈ 27ರ ಮಧ್ಯಾಹ್ನ ಕೃತ್ಯ ನಡೆದಿದೆ. ಯುವತಿಯ ದೂರು ಆಧರಿಸಿ ಪೊಲೀಸರು ಆರೋಪಿಮುನಾಝ್ ಅಹಮದ್ (30)ನನ್ನು ಬಂಧಿಸಿ, ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಆರೋಪಿ ಲಾರಿಯ ಚಾಲಕನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಯುವತಿ ಮೇಲೆ ಎಸಗಿದ ಲೈಂಗಿಕ ದೌರ್ಜನ್ಯದ ವಿಡಿಯೊವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದ ಆರೋಪಿ, ಅದೇ ದಿನ ಸಂಜೆ ಕರೆ ಮಾಡಿ ಕಿರುಕುಳ ನೀಡಿದ್ದ. ನಗ್ನವಾಗಿ ವಿಡಿಯೊ ಕರೆ ಮಾಡಬೇಕು. ಇಲ್ಲ<br />ದಿದ್ದರೆ, ವಿಡಿಯೊ<br />ವನ್ನು ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದ’ ಎಂದು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದರು.</p>.<p>'ಆರೋಪಿಯು ಹೀಗೇ ಬೇರೆ ಯುವತಿಯರಿಗೂ ಕಿರುಕುಳ ನೀಡಿರುವ ಸಾಧ್ಯತೆ ಇದೆ. ಹೆಚ್ಚಿನ ವಿಚಾರಣೆ ನಡೆದಿದ್ದು ಆತನಿಂದ ಮೊಬೈಲ್ಗಳನ್ನೂ ವಶಕ್ಕೆ ಪಡೆದಿದ್ದೇವೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು:ಗೆಳೆಯನ ಜೊತೆ ವಿಹಾರಕ್ಕೆ ಬಂದಿದ್ದ ಯುವತಿ ಮೇಲೆ ಸುರತ್ಕಲ್ನ ಎನ್ಐಟಿಕೆ ಸಮೀಪದ ಕಡಲ ಕಿನಾರೆಯಲ್ಲಿ ಯುವಕನೊಬ್ಬ ಅತ್ಯಾಚಾರ ನಡೆಸಿದ್ದಾಗಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಜುಲೈ 27ರ ಮಧ್ಯಾಹ್ನ ಕೃತ್ಯ ನಡೆದಿದೆ. ಯುವತಿಯ ದೂರು ಆಧರಿಸಿ ಪೊಲೀಸರು ಆರೋಪಿಮುನಾಝ್ ಅಹಮದ್ (30)ನನ್ನು ಬಂಧಿಸಿ, ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಆರೋಪಿ ಲಾರಿಯ ಚಾಲಕನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಯುವತಿ ಮೇಲೆ ಎಸಗಿದ ಲೈಂಗಿಕ ದೌರ್ಜನ್ಯದ ವಿಡಿಯೊವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದ ಆರೋಪಿ, ಅದೇ ದಿನ ಸಂಜೆ ಕರೆ ಮಾಡಿ ಕಿರುಕುಳ ನೀಡಿದ್ದ. ನಗ್ನವಾಗಿ ವಿಡಿಯೊ ಕರೆ ಮಾಡಬೇಕು. ಇಲ್ಲ<br />ದಿದ್ದರೆ, ವಿಡಿಯೊ<br />ವನ್ನು ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದ’ ಎಂದು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿದರು.</p>.<p>'ಆರೋಪಿಯು ಹೀಗೇ ಬೇರೆ ಯುವತಿಯರಿಗೂ ಕಿರುಕುಳ ನೀಡಿರುವ ಸಾಧ್ಯತೆ ಇದೆ. ಹೆಚ್ಚಿನ ವಿಚಾರಣೆ ನಡೆದಿದ್ದು ಆತನಿಂದ ಮೊಬೈಲ್ಗಳನ್ನೂ ವಶಕ್ಕೆ ಪಡೆದಿದ್ದೇವೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>