ಬಾಲಕಾರ್ಮಿಕ ಯೋಜನಾ ಸಂಘದ ಸಹಾಯಕ ಕಾರ್ಮಿಕ ಆಯುಕ್ತ ಹಾಗೂ ಸದಸ್ಯ ಕಾರ್ಯಾದರ್ಶಿ ಶಿವಕುಮಾರ್ ಬಿ. ಮಾತನಾಡಿ, ‘ಬಾಲಕಾರ್ಮಿಕ ಪದ್ಧತಿಯು ಸಾಮಾಜಿಕ ಪಿಡುಗು. ಅದನ್ನು ಹೋಗಲಾಡಿಸಲು ವಿವಿಧ ಇಲಾಖೆಗಳ ನಿರೀಕ್ಷಕರು, 100ಕ್ಕೂ ಅಧಿಕ ಹಠಾತ್ ದಾಳಿಗಳನ್ನು ಮಾಡಿ ಅರಿವು ಮೂಡಿಸಿದ್ದಾರೆ. ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಅರಿವು ಮೂಡಿಸಲು ಜಾಗೃತಿ ರಥವು 9 ದಿನಗಳ ಕಾಲ ಪ್ರತಿ ತಾಲ್ಲೂಕಿನಲ್ಲಿ ಸಂಚರಿಸಿ, ಮಾಹಿತಿ ನೀಡಲಿದೆ’ ಎಂದು ತಿಳಿಸಿದರು.