ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಮೇ ತಿಂಗಳ ಪಡಿತರ ವಿತರಣೆ

ಅರ್ಜಿ ಸಲ್ಲಿಸಿದವರಿಗೂ ಯೋಜನೆ ಪ್ರಯೋಜನ
Last Updated 3 ಮೇ 2020, 11:22 IST
ಅಕ್ಷರ ಗಾತ್ರ

ಮಂಗಳೂರು: ಲಾಕ್‌ಡೌನ್‌ ಸಂದರ್ಭದಲ್ಲಿ ಬಿಡುಗಡೆಯಾದ ಆಹಾರ ಧಾನ್ಯವನ್ನು ಮೇ ತಿಂಗಳಲ್ಲಿ ಫಲಾನುಭವಿಗಳಿಗೆ ವಿತರಿಸಲಾಗುತ್ತಿದೆ.

ಅಂತ್ಯೋದಯ ಕಾರ್ಡ್‌ದಾರರ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ. ಅಕ್ಕಿ, ಪ್ರತಿ ಪಡಿತರ ಚೀಟಿಗೆ 1 ಕೆ.ಜಿ. ತೊಗರಿಬೇಳೆ ಉಚಿತವಾಗಿ ನೀಡಲಾಗುವುದು. ಬಿ.ಪಿ.ಎಲ್ ಕಾರ್ಡ್‌ದಾರರ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ. ಅಕ್ಕಿ, ಪ್ರತಿ ಪಡಿತರ ಚೀಟಿಗೆ 4 ಕೆ.ಜಿ. ಗೋಧಿ, ಪ್ರತಿ ಪಡಿತರ ಚೀಟಿಗೆ 1 ಕೆ.ಜಿ. ತೊಗರಿಬೇಳೆ ಉಚಿತವಾಗಿ ನೀಡಲಾಗುವುದು. ಎ.ಪಿ.ಎಲ್. ಕಾರ್ಡ್‌ದಾರರ ಏಕ ಸದಸ್ಯ ಕುಟುಂಬಕ್ಕೆ 5 ಕೆ.ಜಿ. ಅಕ್ಕಿ, 2 ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆ.ಜಿ.ಅಕ್ಕಿಯನ್ನು ₹15 ರ ದರದಲ್ಲಿ ನೀಡಲಾಗುವುದು.

ಹೊಸದಾಗಿ ಎ.ಪಿ.ಎಲ್ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ ಅಕ್ಕಿ 10 ಕೆ.ಜಿ. ಅಕ್ಕಿಯನ್ನು ₹15 ರ ದರದಲ್ಲಿ ನೀಡಲಾಗುವುದು.

ಅಂತರ ರಾಜ್ಯ, ಅಂತರ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿದ್ದು, ಯಾವುದೇ ವರ್ಗದ ಪಡಿತರ ಚೀಟಿ ಹಾಗೂ ಅರ್ಜಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT