<p><strong>ಮಂಗಳೂರು:</strong> ‘ಕಟೀಲಿನ ನ್ಯಾಯಬೆಲೆ ಅಂಗಡಿಯೊಂದರಲ್ಲಿ ಇತ್ತೀಚೆಗೆ ಗ್ರಾಹಕರೊಬ್ಬರು ಗೋಣಿಚೀಲ ಉಚಿತವಾಗಿ ನೀಡುವಂತೆ ಒತ್ತಾಯಿಸಿ, ಬೆದರಿಸಿ ವಿಡಿಯೊ ಚಿತ್ರೀಕರಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಅಂಗಡಿಯ ಮಾಲೀಕರಿಗೆ ಕಿರುಕುಳ ನೀಡಿದ ಗ್ರಾಹಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಆ ವಿಡಿಯೊವನ್ನು ಡಿಲೀಟ್ ಮಾಡಿಸಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ.</p>.<p>ಆ ವಿಡಿಯೊ ನೋಡಿ, ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಗ್ರಾಹಕರು ನ್ಯಾಯಬೆಲೆ ಅಂಗಡಿಯವರಿಗೆ ತೊಂದರೆ ಕೊಡುತ್ತಿದ್ದಾರೆ. ನ್ಯಾಯಬೆಲೆ ಅಂಗಡಿ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಭಾವನೆ ಮೂಡಿದೆ. ನ್ಯಾಯಬೆಲೆ ಅಂಗಡಿ ನಡೆಸುವವರಿಗೆ ಪ್ರತಿ ಕ್ವಿಂಟಲ್ಗೆ ಲಾಭಾಂಶವನ್ನು ₹56 ನಿಗದಿ ನಿಗದಿಪಡಿಸಿದ್ದು, ಈ ಪೈಕಿ ₹36 ನಗದು ಹಾಗೂ ₹20 ಪ್ರತಿ ಕ್ವಿಂಟಲ್ನ ಎರಡು ಗೋಣಿಚೀಲದ ರೂಪದಲ್ಲಿ ಪಡೆದುಕೊಳ್ಳುವಂತೆ ಸರ್ಕಾರದ ಆದೇಶದಲ್ಲೇ ಉಲ್ಲೇಖವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಕೇಶವಮೂರ್ತಿ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಗೋಣಿಚೀಲವನ್ನು ಉಚಿತವಾಗಿ ಕೊಡುವಂತಿಲ್ಲ. ಈ ಬಗ್ಗೆ ತಿಳಿವಳಿಕೆ ಇಲ್ಲದ ಗ್ರಾಹಕರು ಅಂಗಡಿ ಮಾಲೀಕರನ್ನು ಬೆದರಿಸುತ್ತಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಪಡಿತರ ವಿತರಕರಿಗೆ ಕಮಿಷನ್ ನೀಡದೆ ನಾಲ್ಕು ತಿಂಗಳಾಗಿದ್ದು, ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಕಟೀಲು ಪಡಿತರ ಅಂಗಡಿಯ ದೀಪಾ ನಾಯಕ್ ಮಾತನಾಡಿ,‘ಕಟೀಲು ಸಮೀಪದ ಸಹೋದರರಿಬ್ಬರು ಅಕ್ಕಿ ತೆಗೆದುಕೊಂಡು ಹೋಗಲು ಬರುವಾಗ ಗೋಣಿಚೀಲ ಉಚಿತವಾಗಿ ನೀಡುವಂತೆ ಗಲಾಟೆ ಮಾಡುತ್ತಾರೆ. ಇತ್ತೀಚೆಗೆ ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದಾರೆ. ಇದರಿಂದ ನಾನು ಮಾನಸಿಕವಾಗಿ ಹಿಂಸೆ ಅನುಭವಿಸುತ್ತಿದ್ದೇನೆ. ಈ ಬಗ್ಗೆ ಆಹಾರ ಸಚಿವರು, ಆಹಾರ ಇಲಾಖೆ ಉಪನಿರ್ದೇಶಕರಿಗೆ ದೂರು ನೀಡಿದ್ದೇನೆ. ವಿಡಿಯೊ ಡಿಲೀಟ್ ಮಾಡಿಸುವಂತೆ ಬಜಪೆ ಠಾಣೆಗೆ ಆಗಸ್ಟ್ 22ರಂದು ದೂರು ನೀಡಿದ್ದರೂ, ಇದುವರೆಗೆ ಕ್ರಮ ಆಗಿಲ್ಲ’ ಎಂದು ಹೇಳಿದರು.</p>.<p>ಸಂಘದ ಪದಾಧಿಕಾರಿಗಳಾದ ಭಾಸ್ಕರ್ ಸಾಲ್ಯಾನ್, ರೋಜ್ ಡಿ.ಎಂ., ಮಂಜುನಾಥ ನಾಯಕ್, ದೀಪಾ ನಾಯಕ್, ಮಹಮ್ಮದ್ ರಫೀಕ್, ನಿತ್ಯಾನಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಕಟೀಲಿನ ನ್ಯಾಯಬೆಲೆ ಅಂಗಡಿಯೊಂದರಲ್ಲಿ ಇತ್ತೀಚೆಗೆ ಗ್ರಾಹಕರೊಬ್ಬರು ಗೋಣಿಚೀಲ ಉಚಿತವಾಗಿ ನೀಡುವಂತೆ ಒತ್ತಾಯಿಸಿ, ಬೆದರಿಸಿ ವಿಡಿಯೊ ಚಿತ್ರೀಕರಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಅಂಗಡಿಯ ಮಾಲೀಕರಿಗೆ ಕಿರುಕುಳ ನೀಡಿದ ಗ್ರಾಹಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಆ ವಿಡಿಯೊವನ್ನು ಡಿಲೀಟ್ ಮಾಡಿಸಬೇಕು’ ಎಂದು ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ.</p>.<p>ಆ ವಿಡಿಯೊ ನೋಡಿ, ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಗ್ರಾಹಕರು ನ್ಯಾಯಬೆಲೆ ಅಂಗಡಿಯವರಿಗೆ ತೊಂದರೆ ಕೊಡುತ್ತಿದ್ದಾರೆ. ನ್ಯಾಯಬೆಲೆ ಅಂಗಡಿ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಭಾವನೆ ಮೂಡಿದೆ. ನ್ಯಾಯಬೆಲೆ ಅಂಗಡಿ ನಡೆಸುವವರಿಗೆ ಪ್ರತಿ ಕ್ವಿಂಟಲ್ಗೆ ಲಾಭಾಂಶವನ್ನು ₹56 ನಿಗದಿ ನಿಗದಿಪಡಿಸಿದ್ದು, ಈ ಪೈಕಿ ₹36 ನಗದು ಹಾಗೂ ₹20 ಪ್ರತಿ ಕ್ವಿಂಟಲ್ನ ಎರಡು ಗೋಣಿಚೀಲದ ರೂಪದಲ್ಲಿ ಪಡೆದುಕೊಳ್ಳುವಂತೆ ಸರ್ಕಾರದ ಆದೇಶದಲ್ಲೇ ಉಲ್ಲೇಖವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಕೇಶವಮೂರ್ತಿ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಗೋಣಿಚೀಲವನ್ನು ಉಚಿತವಾಗಿ ಕೊಡುವಂತಿಲ್ಲ. ಈ ಬಗ್ಗೆ ತಿಳಿವಳಿಕೆ ಇಲ್ಲದ ಗ್ರಾಹಕರು ಅಂಗಡಿ ಮಾಲೀಕರನ್ನು ಬೆದರಿಸುತ್ತಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಪಡಿತರ ವಿತರಕರಿಗೆ ಕಮಿಷನ್ ನೀಡದೆ ನಾಲ್ಕು ತಿಂಗಳಾಗಿದ್ದು, ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಕಟೀಲು ಪಡಿತರ ಅಂಗಡಿಯ ದೀಪಾ ನಾಯಕ್ ಮಾತನಾಡಿ,‘ಕಟೀಲು ಸಮೀಪದ ಸಹೋದರರಿಬ್ಬರು ಅಕ್ಕಿ ತೆಗೆದುಕೊಂಡು ಹೋಗಲು ಬರುವಾಗ ಗೋಣಿಚೀಲ ಉಚಿತವಾಗಿ ನೀಡುವಂತೆ ಗಲಾಟೆ ಮಾಡುತ್ತಾರೆ. ಇತ್ತೀಚೆಗೆ ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದಾರೆ. ಇದರಿಂದ ನಾನು ಮಾನಸಿಕವಾಗಿ ಹಿಂಸೆ ಅನುಭವಿಸುತ್ತಿದ್ದೇನೆ. ಈ ಬಗ್ಗೆ ಆಹಾರ ಸಚಿವರು, ಆಹಾರ ಇಲಾಖೆ ಉಪನಿರ್ದೇಶಕರಿಗೆ ದೂರು ನೀಡಿದ್ದೇನೆ. ವಿಡಿಯೊ ಡಿಲೀಟ್ ಮಾಡಿಸುವಂತೆ ಬಜಪೆ ಠಾಣೆಗೆ ಆಗಸ್ಟ್ 22ರಂದು ದೂರು ನೀಡಿದ್ದರೂ, ಇದುವರೆಗೆ ಕ್ರಮ ಆಗಿಲ್ಲ’ ಎಂದು ಹೇಳಿದರು.</p>.<p>ಸಂಘದ ಪದಾಧಿಕಾರಿಗಳಾದ ಭಾಸ್ಕರ್ ಸಾಲ್ಯಾನ್, ರೋಜ್ ಡಿ.ಎಂ., ಮಂಜುನಾಥ ನಾಯಕ್, ದೀಪಾ ನಾಯಕ್, ಮಹಮ್ಮದ್ ರಫೀಕ್, ನಿತ್ಯಾನಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>