ಹಿಂದಿನ ಅವಧಿಯಲ್ಲಿ ಮಂಗಳೂರು ಸುತ್ತಮುತ್ತಲಿನ ಕೆರೆಗಳ ಅಭಿವೃದ್ಧಿ, ಹಸಿರೀಕರಣ, ವೃತ್ತ ನಿರ್ಮಾಣ ಕಾಮಗಾರಿಗೆ ಆದ್ಯತೆ ನೀಡಲಾಗಿತ್ತು. ಮಂಗಳೂರು ಉತ್ತರ ಮತ್ತು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಅನೇಕ ಕೆರೆಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಡಾಕ್ಟರ್ಸ್ ಕಾಲೊನಿ ಕೆರೆ, ಕದ್ರಿ ದೇವಸ್ಥಾನದ ಬಳಿ ಕೆರೆ, ಬಜಾಲ್ ಕೆರೆ, ಕದ್ರಿ ಕಂಬಳ ಕೆರೆ ಮೊದಲಾದವುಗಳ ಕೆಲಸ ಪೂರ್ಣಗೊಂಡಿದೆ. ಕೆಲವು ಕೆರೆಗಳ ಶೇ 5ರಿಂದ 10ರಷ್ಟು ಕೆಲಸ ಬಾಕಿ ಇದ್ದು, ಆದಷ್ಟು ಶೀಘ್ರ ಪೂರ್ಣಗೊಳಿಸಿ, ಕೆಲವೇ ದಿನಗಳಲ್ಲಿ ಉದ್ಘಾಟನೆ ಮಾಡಲಾಗುವುದು. ನೀರಿನ ಕೊರತೆ ನೀಗಿಸುವ ದೃಷ್ಟಿಯಿಂದ ಮತ್ತೆ 40ಕ್ಕೂ ಹೆಚ್ಚು ಕೆರೆಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.