ಬೆಳ್ತಂಗಡಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ನಲ್ಲಿ ಮಂಡಿಸಿದ 2020-21ರ ಸಾಲಿನ ಮುಂಗಡಪತ್ರದಿಂದ ಕೃಷಿ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಶಿಕ್ಷಣ, ತಂತ್ರಜ್ಞಾನ, ರೈಲ್ವೆ, ವಿದ್ಯುತ್, ಮೀನುಗಾರಿಕಾ ಕ್ಷೇತ್ರಗಳಿಗೆ ಉತ್ತೇಜನ ನೀಡುವುದಲ್ಲದೆ ಮಹತ್ವಾಕಾಂಕ್ಷೆಯ ಭಾರತ ನಿರ್ಮಾಣದಲ್ಲಿ ಮಹತ್ತರ ಬಜೆಟ್ ಆಗಲಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.