ಕರಂಗಲ್ಪಾಡಿಯಲ್ಲಿ ತಡೆಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದು, ಪ್ರಕರಣದ ತನಿಖೆಗೆ ಸೂಚಿಸಲಾಗಿದೆ. ಇಬ್ಬರು ಅಧಿಕಾರಿಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಖಾಸಗಿ ಕಟ್ಟಡದ ಗುತ್ತಿಗೆದಾರರೂ ಮೃತರಿಗೆ ₹5 ಲಕ್ಷ ಪರಿಹಾರ ನೀಡಲು ಒಪ್ಪಿಕೊಂಡಿದ್ದು, ಅದನ್ನು ಮೃತರ ಕುಟುಂಬಗಳಿಗೆ ವಿತರಿಸಲಾಗುವುದು ಎಂದು ಹೇಳಿದರು.