<p><strong>ಉಜಿರೆ:</strong> ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಶಿವಮೊಗ್ಗದಿಂದ ಪ್ರಾರಂಭವಾದ ಧರ್ಮ ರಕ್ಷಾ ಜಾಥಾವು ಧರ್ಮಸ್ಥಳಕ್ಕೆ ಮಂಗಳವಾರ ಸಂಜೆ ತಲುಪಿತು.</p>.<p>200ಕ್ಕೂ ಹೆಚ್ಚು ವಾಹನದಲ್ಲಿ ಭಕ್ತರು ಈಶ್ವರಪ್ಪ ಜೊಎ ಬಂದಿದ್ದರು. ಈ ವೇಳೆ ಈಶ್ವರಪ್ಪ ಅವರಿಗೆ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಗೌರವ ಸಲ್ಲಿಕೆ ಮಾಡಲಾಯ್ತು. ಜಾಥಾದೊಂದಿಗೆ ತುಂಗಾ- ಗಂಗಾ-ನೇತ್ರಾವತಿಯ ನದಿಯ ನೀರನ್ನು ತಂದು, ಧರ್ಮಸ್ಥಳದಲ್ಲಿ ಪ್ರೋಕ್ಷಣೆ ಮಾಡಲಾಯಿತು.</p>.<p>ಈ ವೇಳೆ ಮಾತನಾಡಿದ ಈಶ್ವರಪ್ಪ, ‘ನಾವು ಧರ್ಮಸ್ಥಳ ಶುದ್ಧಿಕರಣ ಮಾಡಲು ಬಂದಿದ್ದೇವೆ.<br>ಕಾಶಿಯಿಂದ ಗಂಗಾ ಜಲ, ಶಿವಮೊಗ್ಗದಿಂದ ತುಂಗಾ, ಧರ್ಮಸ್ಥಳದಿಂದ ನೇತ್ರಾವತಿ ನೀರು ತಂದಿದ್ದೇವೆ.<br>ರಸ್ತೆಯಲ್ಲಿ ಪ್ರೋಕ್ಷಣೆ ಮಾಡಿ ಶುದ್ಧ ಮಾಡುತ್ತೇವೆ’ ಎಂದರು.</p>.<p>‘ಧರ್ಮಸ್ಥಳದ ಬಗೆಗಿನ ಅಪಪ್ರಚಾರದಲ್ಲಿ ರಾಷ್ಟ್ರದ್ರೋಹಿಗಳು ಕೈ ಜೋಡಿಸಿದ್ದಾರೆ. ಎಸ್ಐಟಿ ಮೂಲಕ ಸಾಕಷ್ಟು ಮಾಹಿತಿ ಹೊರಬಂದಿದೆ. ಈ ಪ್ರಕರಣದ ಸಮಗ್ರ ತನಿಖೆಯನ್ನು ಎನ್ಐಎಗೆ ವಹಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಶಿವಮೊಗ್ಗದಿಂದ ಪ್ರಾರಂಭವಾದ ಧರ್ಮ ರಕ್ಷಾ ಜಾಥಾವು ಧರ್ಮಸ್ಥಳಕ್ಕೆ ಮಂಗಳವಾರ ಸಂಜೆ ತಲುಪಿತು.</p>.<p>200ಕ್ಕೂ ಹೆಚ್ಚು ವಾಹನದಲ್ಲಿ ಭಕ್ತರು ಈಶ್ವರಪ್ಪ ಜೊಎ ಬಂದಿದ್ದರು. ಈ ವೇಳೆ ಈಶ್ವರಪ್ಪ ಅವರಿಗೆ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಗೌರವ ಸಲ್ಲಿಕೆ ಮಾಡಲಾಯ್ತು. ಜಾಥಾದೊಂದಿಗೆ ತುಂಗಾ- ಗಂಗಾ-ನೇತ್ರಾವತಿಯ ನದಿಯ ನೀರನ್ನು ತಂದು, ಧರ್ಮಸ್ಥಳದಲ್ಲಿ ಪ್ರೋಕ್ಷಣೆ ಮಾಡಲಾಯಿತು.</p>.<p>ಈ ವೇಳೆ ಮಾತನಾಡಿದ ಈಶ್ವರಪ್ಪ, ‘ನಾವು ಧರ್ಮಸ್ಥಳ ಶುದ್ಧಿಕರಣ ಮಾಡಲು ಬಂದಿದ್ದೇವೆ.<br>ಕಾಶಿಯಿಂದ ಗಂಗಾ ಜಲ, ಶಿವಮೊಗ್ಗದಿಂದ ತುಂಗಾ, ಧರ್ಮಸ್ಥಳದಿಂದ ನೇತ್ರಾವತಿ ನೀರು ತಂದಿದ್ದೇವೆ.<br>ರಸ್ತೆಯಲ್ಲಿ ಪ್ರೋಕ್ಷಣೆ ಮಾಡಿ ಶುದ್ಧ ಮಾಡುತ್ತೇವೆ’ ಎಂದರು.</p>.<p>‘ಧರ್ಮಸ್ಥಳದ ಬಗೆಗಿನ ಅಪಪ್ರಚಾರದಲ್ಲಿ ರಾಷ್ಟ್ರದ್ರೋಹಿಗಳು ಕೈ ಜೋಡಿಸಿದ್ದಾರೆ. ಎಸ್ಐಟಿ ಮೂಲಕ ಸಾಕಷ್ಟು ಮಾಹಿತಿ ಹೊರಬಂದಿದೆ. ಈ ಪ್ರಕರಣದ ಸಮಗ್ರ ತನಿಖೆಯನ್ನು ಎನ್ಐಎಗೆ ವಹಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>