ಬೇಗ ಮುಗಿಸಿ: ಶಿರಾಡಿ ಘಾಟ್ ರಸ್ತೆಯನ್ನು 6 ತಿಂಗಳು ಮತ್ತೆ ಬಂದ್ ಮಾಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ ಎಂದ ಅವರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ರಾಜ್ಯದಿಂದ ಪ್ರತ್ಯೇಕ ಮಾಡುವ ಯೋಚನೆ ಮಾಡುತ್ತಿದ್ದೀರಾ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು. ಲೋಕೋಪಯೋಗಿ ಇಲಾಖೆಯ ಸಚಿವ ರೇವಣ್ಣ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಲ್ಲಿ ಮಾತನಾಡಿದ್ದೇನೆ. ಕಾಮಗಾರಿಗೆ ವೇಗ ತೆಗೆದುಕೊಂಡು ಮಾಡಿ. ಇಲ್ಲದಿದ್ದರೆ ಜನರಿಗೆ ಸಮಸ್ಯೆಯಾಗುತ್ತದೆ ಎಂದು ತಿಳಿಸಿದ್ದೇನೆ ಎಂದರು.