<p>ಮಂಗಳೂರು: ಮುಂದಿನ ದಿನಗಳಲ್ಲಿ ಟ್ರೀ ಪಾರ್ಕ್ನ ನಿರ್ವಹಣೆಗಾಗಿ ಸರ್ಕಾರದಿಂದ ಅನುದಾನ ಬಾರದೇ ಇರುವುದರಿಂದ, ಟ್ರೀ ಪಾರ್ಕ್ನ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗುವುದು ಎಂದು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಳನ್ ತಿಳಿಸಿದರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಣ್ಣೀರುಬಾವಿ ಟ್ರೀ ಪಾರ್ಕ್ನ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಟ್ರೀ ಪಾರ್ಕ್ನ ಪ್ರವೇಶ ಶುಲ್ಕದಿಂದ 6 ವರ್ಷದೊಳಗಿನ ಮಕ್ಕಳಿಗೆ ವಿನಾಯಿತಿ ಇದ್ದು, 6 ರಿಂದ 14 ವರ್ಷ ಪ್ರಾಯದವರಿಗೆ ₹ 10 ಮತ್ತು 14 ವರ್ಷ ಮೇಲ್ಪಟ್ಟವರಿಗೆ ₹20 ಹಾಗೂ ಸಾಮಾನ್ಯ ಕ್ಯಾಮೆರಾ ಉಪಯೋಗಕ್ಕೆ ₹25, ಝೂಂ ಕ್ಯಾಮೆರಾ, ಹ್ಯಾಂಡಿ ಕ್ಯಾಮೆರಾ ಬಳಸುವುದಕ್ಕೆ ₹50, ಸ್ಟ್ಯಾಂಡ್ ಕ್ಯಾಮೆರಾ ಬಳಸುವುದಕ್ಕೆ ₹100 ಮತ್ತು ಫೋಟೋ ಶೂಟ್ಗಳಿಗೆ ₹200 ರಂತೆ ಪರಿಷ್ಕರಿಸಲಾಗಿದೆ. ಪರಿಷ್ಕೃತ ಶುಲ್ಕವು ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಸಭೆಯಲ್ಲಿ ಮಂಗಳೂರು ವಲಯ ಅರಣ್ಯಾಧಿಕಾರಿ ಪಿ. ಶ್ರೀಧರ್, ಸಂಬಂಧಪಟ್ಟ ಇಲಾಖಾಧಿಕಾರಿಗಳು, ಪ್ರತಿನಿಧಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಮುಂದಿನ ದಿನಗಳಲ್ಲಿ ಟ್ರೀ ಪಾರ್ಕ್ನ ನಿರ್ವಹಣೆಗಾಗಿ ಸರ್ಕಾರದಿಂದ ಅನುದಾನ ಬಾರದೇ ಇರುವುದರಿಂದ, ಟ್ರೀ ಪಾರ್ಕ್ನ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗುವುದು ಎಂದು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಳನ್ ತಿಳಿಸಿದರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಣ್ಣೀರುಬಾವಿ ಟ್ರೀ ಪಾರ್ಕ್ನ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಟ್ರೀ ಪಾರ್ಕ್ನ ಪ್ರವೇಶ ಶುಲ್ಕದಿಂದ 6 ವರ್ಷದೊಳಗಿನ ಮಕ್ಕಳಿಗೆ ವಿನಾಯಿತಿ ಇದ್ದು, 6 ರಿಂದ 14 ವರ್ಷ ಪ್ರಾಯದವರಿಗೆ ₹ 10 ಮತ್ತು 14 ವರ್ಷ ಮೇಲ್ಪಟ್ಟವರಿಗೆ ₹20 ಹಾಗೂ ಸಾಮಾನ್ಯ ಕ್ಯಾಮೆರಾ ಉಪಯೋಗಕ್ಕೆ ₹25, ಝೂಂ ಕ್ಯಾಮೆರಾ, ಹ್ಯಾಂಡಿ ಕ್ಯಾಮೆರಾ ಬಳಸುವುದಕ್ಕೆ ₹50, ಸ್ಟ್ಯಾಂಡ್ ಕ್ಯಾಮೆರಾ ಬಳಸುವುದಕ್ಕೆ ₹100 ಮತ್ತು ಫೋಟೋ ಶೂಟ್ಗಳಿಗೆ ₹200 ರಂತೆ ಪರಿಷ್ಕರಿಸಲಾಗಿದೆ. ಪರಿಷ್ಕೃತ ಶುಲ್ಕವು ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಸಭೆಯಲ್ಲಿ ಮಂಗಳೂರು ವಲಯ ಅರಣ್ಯಾಧಿಕಾರಿ ಪಿ. ಶ್ರೀಧರ್, ಸಂಬಂಧಪಟ್ಟ ಇಲಾಖಾಧಿಕಾರಿಗಳು, ಪ್ರತಿನಿಧಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>