ಪೊಲೀಸ್ ಕಾನ್ಸ್ಟೆಬಲ್ ರೇಣುಕಾ ಅವರು ಮಧ್ಯಾಹ್ನ ಮನೆಗೆ ಊಟಕ್ಕೆ ತೆರಳುತ್ತಿದ್ದರು. ಈ ವೇಳೆ ಅವರ ಸ್ಕೂಟರ್ ನಿಯಂತ್ರಣಕ್ಕೆ ಸಿಗದೇ ಇದ್ದುದರಿಂದ ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಗಾಡಿಗೆ ಡಿಕ್ಕಿ ಹೊಡೆದಿತ್ತು. ಅದೇ ದಾರಿಯಲ್ಲಿ ಕಾರಿನಲ್ಲಿ ಬರುತ್ತಿದ್ದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಗಾಯಗೊಂಡ ರೇಣುಕಾ ಅವರನ್ನು ತಮ್ಮ ಕಾರಿನಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.