ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಕಾನ್‌ಸ್ಟೆಬಲ್‌ಗೆ ಗಾಯ: ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಕೋಟ

Last Updated 23 ಜೂನ್ 2021, 13:21 IST
ಅಕ್ಷರ ಗಾತ್ರ

ಮಂಗಳೂರು: ಮೂಲ್ಕಿಯ ವಿಜಯ ಸನ್ನಿಧಿ ಜಂಕ್ಷನ್‌ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಕಾನ್‌ಸ್ಟೆಬಲ್‌ ಒಬ್ಬರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಪೊಲೀಸ್‌ ಕಾನ್‌ಸ್ಟೆಬಲ್‌ ರೇಣುಕಾ ಅವರು ಮಧ್ಯಾಹ್ನ ಮನೆಗೆ ಊಟಕ್ಕೆ ತೆರಳುತ್ತಿದ್ದರು. ಈ ವೇಳೆ ಅವರ ಸ್ಕೂಟರ್‌ ನಿಯಂತ್ರಣಕ್ಕೆ ಸಿಗದೇ ಇದ್ದುದರಿಂದ ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್‌ ಗಾಡಿಗೆ ಡಿಕ್ಕಿ ಹೊಡೆದಿತ್ತು. ಅದೇ ದಾರಿಯಲ್ಲಿ ಕಾರಿನಲ್ಲಿ ಬರುತ್ತಿದ್ದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಗಾಯಗೊಂಡ ರೇಣುಕಾ ಅವರನ್ನು ತಮ್ಮ ಕಾರಿನಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಹಿಳಾ ಸಿಬ್ಬಂದಿಯನ್ನು ಮೂಲ್ಕಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT