ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ಚರಂಡಿ ವ್ಯವಸ್ಥೆಯೂ ಇಲ್ಲದೆ ಅಕಾಲಿಕ ಮಳೆಗೆ ಅಡಿಕೆ ತೋಟದಲ್ಲಿ ಕೆಸರುಸಹಿತ ಮಳೆ ನೀರು ನಿಂತು ಅಡಿಕೆ ಫಸಲು ನೆಲಕಚ್ಚುವ ಭೀತಿ ಎದುರಾಗಿದೆ. ಕೆಲವೆಡೆ ರಸ್ತೆಗಿಂತಲೂ ಎತ್ತರಕ್ಕೆ ಒಳಚರಂಡಿ ನಿರ್ಮಿಸಲಾಗಿದ್ದು, ರಸ್ತೆಯ ಕೆಳಭಾಗದಲ್ಲಿ ರೈತರಿಗೆ ಭೀತಿ ಎದುರಾಗಿದೆ. ಈ ನಡುವೆ ಕಾಮಗಾರಿ ಪೂರ್ಣಗೊಳ್ಳದ ಪರಿಣಾಮ ಮಳೆಗಾಲದಲ್ಲಿ ಅಡಿಕೆ, ತೆಂಗು, ಬಾಳೆ, ಕರಿಮೆಣಸು ಕೃಷಿ ಹಾನಿಗೀಡಾಗುವ ಸಾಧ್ಯತೆಯೂ ಇದೆ ಎಂದು ಸ್ಥಳೀಯ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.