‘ಈ ರಸ್ತೆ ಬೆಳ್ತಂಗಡಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯನ್ನು ಹಂಚಿಕೊಂಡಿದ್ದು, ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ರಸ್ತೆಯು ಸುಸ್ಥಿತಿಯಲ್ಲಿದ್ದರೆ, ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಕೇವಲ ಒಂದೂವರೆ ಕಿ.ಮೀ. ಉದ್ದದ ರಸ್ತೆಯ ಭಾಗವು 2 ವರ್ಷಗಳ ಹಿಂದೆಯೇ ಡಾಂಬಾರು ಕಿತ್ತು ಹೋಗಿ ಸಂಚಾರಕ್ಕೆ ಅಯೋಗ್ಯವಾಗಿತ್ತು. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸದಸ್ಯರು, ಶಾಸಕರಿಗೆ ಮಾಡಿರುವ ಮನವಿಗೆ ಸ್ಪಂದನೆ ದೊರೆತಿಲ್ಲ’ ಎಂದು ಗ್ರಾಮಸ್ಥರು ದೂರಿದ್ದಾರೆ.