<p><strong>ಪುತ್ತೂರು</strong>: ಕಾಲೇಜಿನ ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಗೆ ಹೆಲ್ಮೆಟ್ ಧರಿಸಿದ್ದ ವ್ಯಕ್ತಿಗಳಿಬ್ಬರು ಬಂದು ದರೋಡೆಗೆ ಯತ್ನಿಸಿದ ಘಟನೆ ಪುತ್ತೂರು ನಗರದ ಕೊಂಬೆಟ್ಟಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.</p>.<p>ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ.ನಾರಾಯಣ ಮತ್ತು ವತ್ಸಲಾರಾಜ್ಞಿ ದಂಪತಿಯ ಮನೆಯಲ್ಲಿ ದರೋಡೆಗೆ ಯತ್ನ ನಡೆದಿದೆ.</p>.<p>ಡಿ.17ರಂದು ರಾತ್ರಿ ವೇಳೆ ವತ್ಸಲಾರಾಜ್ಞಿ ಅವರು ಊಟ ಮಾಡಿ ಮನೆಯೊಳಗೆ ಕುಳಿತಿದ್ದ ವೇಳೆ ತೆರೆದಿಟ್ಟಿದ್ದ ಹಿಂಬದಿಯ ಬಾಗಿಲಿನ ಮೂಲಕ ಒಳನುಗ್ಗಿದ ವ್ಯಕ್ತಿಗಳಿಬ್ಬರು ಬಂದು ಅವರ ಕಣ್ಣು ಮತ್ತು ಬಾಯಿಯನ್ನು ಹಿಂದಿನಿಂದ ಮುಚ್ಚಿದ್ದರು. ಆ ವೇಳೆ ವತ್ಸಲರಾಜ್ಞಿ ಹೊರಲಾಡಿ ಕುರ್ಚಿಯಿಂದ ಕೆಳಗೆ ಬಿದ್ದು ಬೊಬ್ಬೆ ಹೊಡೆದಿದ್ದರು. ಈ ವೇಳೆ ಅಲ್ಲಿಗೆ ಬಂದ ಎ.ವಿ.ನಾರಾಯಣ್ ಅವರ ಕಣ್ಣು ಮತ್ತು ಬಾಯಿಯನ್ನು ಮುಚ್ಚಲು ಯತ್ನಿಸಿದ ದುಷ್ಕರ್ಮಿಗಳು ಬಳಿಕ ಮನೆಯ ಹಿಂಬದಿಯ ಬಾಗಿಲ ಮೂಲಕ ಓಡಿ ಹೋಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಯಾವುದೇ ಸ್ವತ್ತು ಕಳವಾಗಿಲ್ಲ ಎಂಬ ಮಾಹಿತಿ ಲಭಿಸಿದೆ. ಎ.ವಿ.ನಾರಾಯಣ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ಕಾಲೇಜಿನ ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಗೆ ಹೆಲ್ಮೆಟ್ ಧರಿಸಿದ್ದ ವ್ಯಕ್ತಿಗಳಿಬ್ಬರು ಬಂದು ದರೋಡೆಗೆ ಯತ್ನಿಸಿದ ಘಟನೆ ಪುತ್ತೂರು ನಗರದ ಕೊಂಬೆಟ್ಟಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.</p>.<p>ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ.ನಾರಾಯಣ ಮತ್ತು ವತ್ಸಲಾರಾಜ್ಞಿ ದಂಪತಿಯ ಮನೆಯಲ್ಲಿ ದರೋಡೆಗೆ ಯತ್ನ ನಡೆದಿದೆ.</p>.<p>ಡಿ.17ರಂದು ರಾತ್ರಿ ವೇಳೆ ವತ್ಸಲಾರಾಜ್ಞಿ ಅವರು ಊಟ ಮಾಡಿ ಮನೆಯೊಳಗೆ ಕುಳಿತಿದ್ದ ವೇಳೆ ತೆರೆದಿಟ್ಟಿದ್ದ ಹಿಂಬದಿಯ ಬಾಗಿಲಿನ ಮೂಲಕ ಒಳನುಗ್ಗಿದ ವ್ಯಕ್ತಿಗಳಿಬ್ಬರು ಬಂದು ಅವರ ಕಣ್ಣು ಮತ್ತು ಬಾಯಿಯನ್ನು ಹಿಂದಿನಿಂದ ಮುಚ್ಚಿದ್ದರು. ಆ ವೇಳೆ ವತ್ಸಲರಾಜ್ಞಿ ಹೊರಲಾಡಿ ಕುರ್ಚಿಯಿಂದ ಕೆಳಗೆ ಬಿದ್ದು ಬೊಬ್ಬೆ ಹೊಡೆದಿದ್ದರು. ಈ ವೇಳೆ ಅಲ್ಲಿಗೆ ಬಂದ ಎ.ವಿ.ನಾರಾಯಣ್ ಅವರ ಕಣ್ಣು ಮತ್ತು ಬಾಯಿಯನ್ನು ಮುಚ್ಚಲು ಯತ್ನಿಸಿದ ದುಷ್ಕರ್ಮಿಗಳು ಬಳಿಕ ಮನೆಯ ಹಿಂಬದಿಯ ಬಾಗಿಲ ಮೂಲಕ ಓಡಿ ಹೋಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಯಾವುದೇ ಸ್ವತ್ತು ಕಳವಾಗಿಲ್ಲ ಎಂಬ ಮಾಹಿತಿ ಲಭಿಸಿದೆ. ಎ.ವಿ.ನಾರಾಯಣ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>