<p><strong>ಮಂಗಳೂರು:</strong> ಕರ್ನಾಟಕ ಜಲಸಾರಿಗೆ ಮಂಡಳಿಯು ಸಾಗರಮಾಲಾ ಯೋಜನೆಯಡಿ ಹೊಯ್ಗೆಬಜಾರದಿಂದ ಕೂಳೂರು ನಡುವಿನ ಜಲಮಾರ್ಗದಲ್ಲಿ ರೊರೊ ಹಡಗುಗಳ ಸಂಚಾರಕ್ಕೆ ಯೋಜನೆ ರೂಪಿಸಿದ್ದು, ಈ ಕುರಿತ ಸಾರ್ವಜನಿಕ ಪರಿಸರ ಆಲಿಕೆ ಸಭೆ ನಡೆಯಿತು.</p>.<p>ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅಧ್ಯಕ್ಷತೆಯಲ್ಲಿ ಗುರುವಾರ ಇಲ್ಲಿ ನಡೆದ ಸಭೆಯಲ್ಲಿ ಪರಿಸರಾಸಕ್ತರು, ಸ್ಥಳೀಯ ಮೀನುಗಾರರು, ಬಹುಪಾಲು ಜನರು ಪ್ರಸ್ತಾವಿತ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಎನ್ಇಸಿಎಫ್ ಸಂಘಟನೆಯ ಶಶಿಧರ ಶೆಟ್ಟಿ ಮಾತನಾಡಿ, ‘ಅಭಿವೃದ್ಧಿ ಹೆಸರಿನಲ್ಲಿ ಈಗಾಗಲೇ ನದಿ ಒತ್ತುವರಿ ಆಗಿದೆ. ಪರಿಸರಕ್ಕೆ ಹಾನಿ ಮಾಡುವ ಯೋಜನೆ ಅನುಷ್ಠಾನಗೊಳಿಸಿ ಜನರ ಹಣ ಪೋಲು ಮಾಡುವುದಕ್ಕಿಂತ ಪರ್ಯಾಯ ಮಾರ್ಗದ ಬಗ್ಗೆ ಯೋಚಿಸಬೇಕು’ ಎಂದರು.</p>.<p>ಮಂಗಳೂರು ಟ್ರಾಲ್ ಬೋಟ್ ಯೂನಿಯನ್ ಅಧ್ಯಕ್ಷ ಚೇತನ್ ಬೆಂಗ್ರೆ ಮಾತನಾಡಿ, ‘ಪ್ರಸ್ತಾಪಿತ 3 ಮೀಟರ್ ಆಳದ ಡ್ರೆಜ್ಜಿಂಗ್, ಈ ಯೋಜನೆಗೆ ಪೂರಕವಾಗಲಿದೆಯೇ? ಮಂಗಳೂರು ದಕ್ಕೆಯಲ್ಲಿ ಬೋಟ್ ನಿಲುಗಡೆಗೆ ಜಾಗದ ಕೊರತೆ ಇದ್ದು, 100 ಮೀನುಗಾರಿಕಾ ಬೋಟ್ ನಿಲ್ಲಿಸುವ ಜಾಗದಲ್ಲಿ 1,300 ಬೋಟ್ಗಳನ್ನು ನಿಲ್ಲಿಸುವ ಪರಿಸ್ಥಿತಿ ಇದೆ. ಜೆಟ್ಟಿ ನಿರ್ಮಾಣಕ್ಕೆ ಸರಿಯಾದ ವ್ಯವಸ್ಥೆ ಮಾಡಿಕೊಂಡು, ಈ ಯೋಜನೆ ಅನುಷ್ಠಾನಗೊಳಿಸಬೇಕು’ ಎಂದರು.</p>.<p>‘ಬಹುಕಾಲದ ಬೇಡಿಕೆಯಾಗಿರುವ ಮೂರನೇ ಹಂತದ ಜಟ್ಟಿ ವಿಸ್ತರಣೆ ನಡೆಯುತ್ತಿದೆ. ಮುಂದೆ 4 ಮತ್ತು 5ನೇ ಹಂತದ ಜೆಟ್ಟಿ ವಿಸ್ತರಣೆಗೆ ಈ ಯೋಜನೆಯಿಂದ ಅವಕಾಶ ಆಗಲಾರದು. ಫಲ್ಗುಣಿ ನದಿಯಲ್ಲಿ ಡ್ರೆಜ್ಜಿಂಗ್ ಆಗಬೇಕು. ಕೂಲಂಕಷ ಪರಿಶೀಲಿಸಿ ಯೋಜನೆ ಜಾರಿಗೊಳಿಸಬೇಕು’ ಎಂದು ಟ್ರಾಲ್ಬೋಟ್ ಯೂನಿಯನ್ನ ಉಪಾಧ್ಯಕ್ಷ ಇಬ್ರಾಹಿಂ ಆಗ್ರಹಿಸಿದರು.</p>.<p>ಸಾಮಾಜಿಕ ಕಾರ್ಯಕರ್ತ ಬಿ.ಕೆ. ಇಮ್ತಿಯಾಜ್, ಯೋಜನೆ ಅನುಷ್ಠಾನಕ್ಕೆ ಆಕ್ಷೇಪ ಇರುವುದಾಗಿ ಹೇಳಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಜನರ ತೆರಿಗೆ ಹಣ ದುರ್ಬಳಕೆಯಾಗಿದೆ. ಇಂತಹ ಯೋಜನೆಗಳಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ. ಯೋಜನೆ ಜಾರಿಗೆ ಮುನ್ನ ಕಲುಷಿತಗೊಂಡಿರುವ ಫಲ್ಗುಣಿ ನದಿ ನೀರನ್ನು ಪರೀಕ್ಷಿಸಬೇಕು ಎಂದರು.</p>.<p>ಅರುಣ್ ಕುಮಾರ್ ಮಾತನಾಡಿ, ‘ಈ ಯೋಜನೆಯು ಶಾಶ್ವತ ವ್ಯವಸ್ಥೆ ಅಲ್ಲ. ವಾಹನ ದಟ್ಟಣೆ ನಿಯಂತ್ರಣದ ಕಾರಣ ನೀಡಿ ಈ ಯೋಜನೆ ಅನುಷ್ಠಾನಗೊಳಿಸುವ ಬದಲಾಗಿ ರಿಂಗ್ ರೋಡ್ ನಿರ್ಮಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು’ ಎಂದರು.</p>.<p>ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ (ಪ್ರಭಾರಿ) ಕೆ. ಕೀರ್ತಿಕುಮಾರ್, ಪರಿಸರ ಅಧಿಕಾರಿ ಲಕ್ಷ್ಮೀಕಾಂತ ಎಚ್. ಉಪಸ್ಥಿತರಿದ್ದರು.</p>.<div><blockquote>ಮಂಗಳೂರು ನಗರದಲ್ಲಿ ಯಾವುದೇ ರೀತಿಯ ತೊಂದರೆ ಎದುರಾದಾಗ ಈ ಜಲಮಾರ್ಗವು ಪರ್ಯಾಯ ಸಂಪರ್ಕ ವ್ಯವಸ್ಥೆಯಾಗಲಿದೆ. ಪರಿಸರ ಅಧಿಕಾರಿಗಳು ಸ್ಥಳ ಭೇಟಿ ನೀಡಿಯೇ ಯೋಜನೆ ರೂಪಿಸಿದ್ದಾರೆ. </blockquote><span class="attribution">ದರ್ಶನ್ ಎಚ್.ವಿ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕರ್ನಾಟಕ ಜಲಸಾರಿಗೆ ಮಂಡಳಿಯು ಸಾಗರಮಾಲಾ ಯೋಜನೆಯಡಿ ಹೊಯ್ಗೆಬಜಾರದಿಂದ ಕೂಳೂರು ನಡುವಿನ ಜಲಮಾರ್ಗದಲ್ಲಿ ರೊರೊ ಹಡಗುಗಳ ಸಂಚಾರಕ್ಕೆ ಯೋಜನೆ ರೂಪಿಸಿದ್ದು, ಈ ಕುರಿತ ಸಾರ್ವಜನಿಕ ಪರಿಸರ ಆಲಿಕೆ ಸಭೆ ನಡೆಯಿತು.</p>.<p>ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅಧ್ಯಕ್ಷತೆಯಲ್ಲಿ ಗುರುವಾರ ಇಲ್ಲಿ ನಡೆದ ಸಭೆಯಲ್ಲಿ ಪರಿಸರಾಸಕ್ತರು, ಸ್ಥಳೀಯ ಮೀನುಗಾರರು, ಬಹುಪಾಲು ಜನರು ಪ್ರಸ್ತಾವಿತ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಎನ್ಇಸಿಎಫ್ ಸಂಘಟನೆಯ ಶಶಿಧರ ಶೆಟ್ಟಿ ಮಾತನಾಡಿ, ‘ಅಭಿವೃದ್ಧಿ ಹೆಸರಿನಲ್ಲಿ ಈಗಾಗಲೇ ನದಿ ಒತ್ತುವರಿ ಆಗಿದೆ. ಪರಿಸರಕ್ಕೆ ಹಾನಿ ಮಾಡುವ ಯೋಜನೆ ಅನುಷ್ಠಾನಗೊಳಿಸಿ ಜನರ ಹಣ ಪೋಲು ಮಾಡುವುದಕ್ಕಿಂತ ಪರ್ಯಾಯ ಮಾರ್ಗದ ಬಗ್ಗೆ ಯೋಚಿಸಬೇಕು’ ಎಂದರು.</p>.<p>ಮಂಗಳೂರು ಟ್ರಾಲ್ ಬೋಟ್ ಯೂನಿಯನ್ ಅಧ್ಯಕ್ಷ ಚೇತನ್ ಬೆಂಗ್ರೆ ಮಾತನಾಡಿ, ‘ಪ್ರಸ್ತಾಪಿತ 3 ಮೀಟರ್ ಆಳದ ಡ್ರೆಜ್ಜಿಂಗ್, ಈ ಯೋಜನೆಗೆ ಪೂರಕವಾಗಲಿದೆಯೇ? ಮಂಗಳೂರು ದಕ್ಕೆಯಲ್ಲಿ ಬೋಟ್ ನಿಲುಗಡೆಗೆ ಜಾಗದ ಕೊರತೆ ಇದ್ದು, 100 ಮೀನುಗಾರಿಕಾ ಬೋಟ್ ನಿಲ್ಲಿಸುವ ಜಾಗದಲ್ಲಿ 1,300 ಬೋಟ್ಗಳನ್ನು ನಿಲ್ಲಿಸುವ ಪರಿಸ್ಥಿತಿ ಇದೆ. ಜೆಟ್ಟಿ ನಿರ್ಮಾಣಕ್ಕೆ ಸರಿಯಾದ ವ್ಯವಸ್ಥೆ ಮಾಡಿಕೊಂಡು, ಈ ಯೋಜನೆ ಅನುಷ್ಠಾನಗೊಳಿಸಬೇಕು’ ಎಂದರು.</p>.<p>‘ಬಹುಕಾಲದ ಬೇಡಿಕೆಯಾಗಿರುವ ಮೂರನೇ ಹಂತದ ಜಟ್ಟಿ ವಿಸ್ತರಣೆ ನಡೆಯುತ್ತಿದೆ. ಮುಂದೆ 4 ಮತ್ತು 5ನೇ ಹಂತದ ಜೆಟ್ಟಿ ವಿಸ್ತರಣೆಗೆ ಈ ಯೋಜನೆಯಿಂದ ಅವಕಾಶ ಆಗಲಾರದು. ಫಲ್ಗುಣಿ ನದಿಯಲ್ಲಿ ಡ್ರೆಜ್ಜಿಂಗ್ ಆಗಬೇಕು. ಕೂಲಂಕಷ ಪರಿಶೀಲಿಸಿ ಯೋಜನೆ ಜಾರಿಗೊಳಿಸಬೇಕು’ ಎಂದು ಟ್ರಾಲ್ಬೋಟ್ ಯೂನಿಯನ್ನ ಉಪಾಧ್ಯಕ್ಷ ಇಬ್ರಾಹಿಂ ಆಗ್ರಹಿಸಿದರು.</p>.<p>ಸಾಮಾಜಿಕ ಕಾರ್ಯಕರ್ತ ಬಿ.ಕೆ. ಇಮ್ತಿಯಾಜ್, ಯೋಜನೆ ಅನುಷ್ಠಾನಕ್ಕೆ ಆಕ್ಷೇಪ ಇರುವುದಾಗಿ ಹೇಳಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಜನರ ತೆರಿಗೆ ಹಣ ದುರ್ಬಳಕೆಯಾಗಿದೆ. ಇಂತಹ ಯೋಜನೆಗಳಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ. ಯೋಜನೆ ಜಾರಿಗೆ ಮುನ್ನ ಕಲುಷಿತಗೊಂಡಿರುವ ಫಲ್ಗುಣಿ ನದಿ ನೀರನ್ನು ಪರೀಕ್ಷಿಸಬೇಕು ಎಂದರು.</p>.<p>ಅರುಣ್ ಕುಮಾರ್ ಮಾತನಾಡಿ, ‘ಈ ಯೋಜನೆಯು ಶಾಶ್ವತ ವ್ಯವಸ್ಥೆ ಅಲ್ಲ. ವಾಹನ ದಟ್ಟಣೆ ನಿಯಂತ್ರಣದ ಕಾರಣ ನೀಡಿ ಈ ಯೋಜನೆ ಅನುಷ್ಠಾನಗೊಳಿಸುವ ಬದಲಾಗಿ ರಿಂಗ್ ರೋಡ್ ನಿರ್ಮಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು’ ಎಂದರು.</p>.<p>ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ (ಪ್ರಭಾರಿ) ಕೆ. ಕೀರ್ತಿಕುಮಾರ್, ಪರಿಸರ ಅಧಿಕಾರಿ ಲಕ್ಷ್ಮೀಕಾಂತ ಎಚ್. ಉಪಸ್ಥಿತರಿದ್ದರು.</p>.<div><blockquote>ಮಂಗಳೂರು ನಗರದಲ್ಲಿ ಯಾವುದೇ ರೀತಿಯ ತೊಂದರೆ ಎದುರಾದಾಗ ಈ ಜಲಮಾರ್ಗವು ಪರ್ಯಾಯ ಸಂಪರ್ಕ ವ್ಯವಸ್ಥೆಯಾಗಲಿದೆ. ಪರಿಸರ ಅಧಿಕಾರಿಗಳು ಸ್ಥಳ ಭೇಟಿ ನೀಡಿಯೇ ಯೋಜನೆ ರೂಪಿಸಿದ್ದಾರೆ. </blockquote><span class="attribution">ದರ್ಶನ್ ಎಚ್.ವಿ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>