ಈ ಸಂಬಂಧ ಪರಿಶೀಲನೆ ನಡೆಸಿದ ಬೆಳ್ತಂಗಡಿ ಆರ್ಎಫ್ಒ ಮೋಹನ್ ಕುಮಾರ್ ಅವರ ತಂಡ, ಡಿಎಫ್ಒ ಆಂಟನಿ ಮರಿಯಪ್ಪ ಅವರ ನಿರ್ದೇಶನದಂತೆ ರಾತ್ರಿ ಗಸ್ತು ಆರಂಭಿಸಿದೆ. ಗಸ್ತು ತಂಡವು ಚಾರ್ಮಾಡಿ ಪೇಟೆಯಿಂದ ಘಾಟಿ ಪರಿಸರದವರೆಗೆ ರಾತ್ರಿ ಸಂಚರಿಸುತ್ತದೆ. ಆನೆ ಕಂಡು ಬಂದರೆ ಅಗತ್ಯ ಸಂದರ್ಭ ಸಿಬ್ಬಂದಿಗೆ ಸ್ವ- ರಕ್ಷಣೆಗಾಗಿ ಬಂದೂಕು, ಆನೆ ಓಡಿಸಲು ಬೇಕಾದ ಪಟಾಕಿ, ವಾಹನ, ಟಾರ್ಚ್ ಒದಗಿಸಲಾಗಿದೆ. ಎರಡು ದಿನಗಳಿಂದ ಘಾಟಿ ಪರಿಸರದಲ್ಲಿ ಕಾಡಾನೆ ಕಂಡು ಬಂದಿಲ್ಲ. ಘಾಟಿ ಸಮೀಪದ ನೆರಿಯ ಗ್ರಾಮದ ಬಾಂಜಾರು ಮಲೆ ಪರಿಸರಕ್ಕೆ ಹೋಗಿರುವ ಶಂಕೆ ವ್ಯಕ್ತವಾಗಿದೆ.