ಶಕ್ತಿನಗರ: ಎಟಿಎಂನಿಂದ 1 ಲಕ್ಷ ಪಡೆದು ವಂಚನೆ
ಮಂಗಳೂರು: ಶಕ್ತಿನಗರದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯ ಎಟಿಎಂನಿಂದ ₹ 1,09,000 ನಗದನ್ನು ಅಕ್ರಮವಾಗಿ ಹಿಂಪಡೆದು ವಂಚಿಸಿದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಎಟಿಎಂಗೆ 2022 ರ ಅಕ್ಟೋಬರ್ ತಿಂಗಳಲ್ಲಿ ಬಂದಿದ್ದ ವಂಚಕರು ಬೇರೆ ಬ್ಯಾಂಕಿನ ಎ.ಟಿ.ಎಂ ಕಾರ್ಡ್ ಬಳಸಿ, ಯಂತ್ರವನ್ನು ಟ್ಯಾಂಪರಿಂಗ್ ಮಾಡಿದ್ದಾರೆ. ನೆಟ್ವರ್ಕ್ ಮತ್ತು ಪವರ್ ಕೇಬಲ್ ಕತ್ತರಿಸಿ ಯಂತ್ರವನ್ನು ಸೂಪರ್ವೈಸರ್ ಮೋಡ್ ತಂದು ₹ 1,09,000 ನಗದು ಪಡೆದು ವಂಚಿಸಿದ್ದಾರೆ ಎಂದು ಬ್ಯಾಂಕಿನ ಶಾಖಾ ವ್ಯವಸ್ಥಾಪಕ ಒಬಿಲಿ ರಿಯಾಜ್ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.