<p><strong>ಕಾಸರಗೋಡು:</strong>ನಿವೃತ್ತ ಬ್ಯಾಂಕ್ ಉದ್ಯೋಗಿ ಹಾಗೂ ಕರ್ನಾಟಕ ಉತ್ತರ ಭಾಗದಲ್ಲಿ ಆರ್ಎಸ್ಎಸ್ ಪ್ರಚಾರ ಪ್ರಮುಖರಾಗಿದ್ದ ರಾಮಚಂದ್ರ ಭಟ್(66) ಮಂಗಳವಾರ ರಾತ್ರಿ 9ಕ್ಕೆ ಹೃದಯಾಘಾತದಿಂದ ನಿಧನರಾದರು.</p>.<p>ರಾಮಚಂದ್ರ ಅವರು ಕಾಸರಗೋಡು ಸಮೀಪದ ಮುಳ್ಳೇರಿಯಾದವರು. ಬಸ್ನಲ್ಲಿ ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಬಂಟ್ವಾಳ ಕ್ರಾಸ್ ಬಳಿಹೃದಯಾಘಾತವಾಗಿದೆ. ಅವರು ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡ ಬಳಿಕ ಮೃತದೇಹವನ್ನು ಹುಟ್ಟೂರಿಗೆ ತರಲಾಗಿದೆ.</p>.<p>ಅವರಿಗೆ ಪತ್ನಿಹಾಗೂ ಇಬ್ಬರು ಮಕ್ಕಳಿದ್ದು, ಮಗ ಅಮೆರಿಕದಲ್ಲಿ ಹಾಗೂ ಮಗಳು ಮಂಗಳೂರಿನಲ್ಲಿದ್ದಾರೆ.ಮುಳ್ಳೇರಿಯಾದಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.</p>.<p>ಬಾಲ್ಯದಿಂದಲೇ ಆರ್ಎಸ್ಎಸ್ನಲ್ಲಿ ತೊಡಗಿಸಿಕೊಂಡಿದ್ದ ರಾಮಚಂದ್ರ, ಬ್ಯಾಂಕ್ ಉದ್ಯೋಗಿಯಾಗಿದ್ದರು. ಕರ್ನಾಟಕದ ಉತ್ತರ ಭಾಗದಲ್ಲಿ ಕರ್ತವ್ಯದ ಹೆಚ್ಚು ಅವಧಿಯನ್ನು ಕಳೆದ ಅವರನ್ನುಇದೇ ಭಾಗದಲ್ಲಿ ಆರ್ಎಸ್ಎಸ್ ಪ್ರಚಾರ ಪ್ರಮುಖರನ್ನಾಗಿ ನೇಮಿಸಲಾಗಿತ್ತು. ಬೆಳಗಾವಿಯಲ್ಲಿ ಅವರುನೆಲೆಸಿದ್ದರು.</p>.<p>ಆರ್ಎಸ್ಎಸ್ ಕಾರ್ಯಕರ್ತರನ್ನು ಹುರಿದುಂಬಿಸುವ ನೂರಾರು ಗೀತೆಗಳನ್ನು ರಚಿಸಿದ್ದರು. ಅವರ ‘ಯುವಮನದೊಳಿಂದು ಸೀಮೋಲಂಘನದ ತವಕ’ ಎಂಬ ಗೀತೆಸಂಘದ ವಲಯದಲ್ಲಿ ಸಾಕಷ್ಟು ಜನಪ್ರಿಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು:</strong>ನಿವೃತ್ತ ಬ್ಯಾಂಕ್ ಉದ್ಯೋಗಿ ಹಾಗೂ ಕರ್ನಾಟಕ ಉತ್ತರ ಭಾಗದಲ್ಲಿ ಆರ್ಎಸ್ಎಸ್ ಪ್ರಚಾರ ಪ್ರಮುಖರಾಗಿದ್ದ ರಾಮಚಂದ್ರ ಭಟ್(66) ಮಂಗಳವಾರ ರಾತ್ರಿ 9ಕ್ಕೆ ಹೃದಯಾಘಾತದಿಂದ ನಿಧನರಾದರು.</p>.<p>ರಾಮಚಂದ್ರ ಅವರು ಕಾಸರಗೋಡು ಸಮೀಪದ ಮುಳ್ಳೇರಿಯಾದವರು. ಬಸ್ನಲ್ಲಿ ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಬಂಟ್ವಾಳ ಕ್ರಾಸ್ ಬಳಿಹೃದಯಾಘಾತವಾಗಿದೆ. ಅವರು ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡ ಬಳಿಕ ಮೃತದೇಹವನ್ನು ಹುಟ್ಟೂರಿಗೆ ತರಲಾಗಿದೆ.</p>.<p>ಅವರಿಗೆ ಪತ್ನಿಹಾಗೂ ಇಬ್ಬರು ಮಕ್ಕಳಿದ್ದು, ಮಗ ಅಮೆರಿಕದಲ್ಲಿ ಹಾಗೂ ಮಗಳು ಮಂಗಳೂರಿನಲ್ಲಿದ್ದಾರೆ.ಮುಳ್ಳೇರಿಯಾದಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.</p>.<p>ಬಾಲ್ಯದಿಂದಲೇ ಆರ್ಎಸ್ಎಸ್ನಲ್ಲಿ ತೊಡಗಿಸಿಕೊಂಡಿದ್ದ ರಾಮಚಂದ್ರ, ಬ್ಯಾಂಕ್ ಉದ್ಯೋಗಿಯಾಗಿದ್ದರು. ಕರ್ನಾಟಕದ ಉತ್ತರ ಭಾಗದಲ್ಲಿ ಕರ್ತವ್ಯದ ಹೆಚ್ಚು ಅವಧಿಯನ್ನು ಕಳೆದ ಅವರನ್ನುಇದೇ ಭಾಗದಲ್ಲಿ ಆರ್ಎಸ್ಎಸ್ ಪ್ರಚಾರ ಪ್ರಮುಖರನ್ನಾಗಿ ನೇಮಿಸಲಾಗಿತ್ತು. ಬೆಳಗಾವಿಯಲ್ಲಿ ಅವರುನೆಲೆಸಿದ್ದರು.</p>.<p>ಆರ್ಎಸ್ಎಸ್ ಕಾರ್ಯಕರ್ತರನ್ನು ಹುರಿದುಂಬಿಸುವ ನೂರಾರು ಗೀತೆಗಳನ್ನು ರಚಿಸಿದ್ದರು. ಅವರ ‘ಯುವಮನದೊಳಿಂದು ಸೀಮೋಲಂಘನದ ತವಕ’ ಎಂಬ ಗೀತೆಸಂಘದ ವಲಯದಲ್ಲಿ ಸಾಕಷ್ಟು ಜನಪ್ರಿಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>