<p><strong>ಮಂಗಳೂರು:</strong> ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದ್ದು, ಕೇರಳದಿಂದ ಜಿಲ್ಲೆಗೆ ಬರುವವರಿಗೆ ಮಂಗಳವಾರ (ಜೂ.29)ದಿಂದ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.</p>.<p>ತಲಪಾಡಿ ಚೆಕ್ಪೋಸ್ಟ್ನಲ್ಲಿ ಸೋಮವಾರ ವಾಹನಗಳ ತಪಾಸಣೆ ನಡೆಸಿದ ಬಳಿಕ ಈ ಮಾಹಿತಿ ನೀಡಿದ ಅವರು, ಸೋಮವಾರ ಯಾವುದೇ ಕಟ್ಟುನಿಟ್ಟು ಮಾಡಿಲ್ಲ. ಆದರೆ, ಮಂಗಳವಾರದಿಂದ ಕಡ್ಡಾಯ ಮಾಡಲಾಗಿದೆ ಎಂದರು.</p>.<p>ಕೇರಳ ಗಡಿ ಭಾಗದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿದ್ದು, ಡೆಲ್ಟಾ ವೇರಿಯಂಟ್ ಪತ್ತೆಯಾಗಿರುವ ಸಂಶಯದ ಮೇರೆಗೆ ಕೇರಳ ಗಡಿಯನ್ನು ಹಂಚಿಕೊಳ್ಳುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ ಎಂದರು.</p>.<p>ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದ ಚೆಕ್ಪೋಸ್ಟ್ಗಳಲ್ಲಿ ಕಟ್ಟು ನಿಟ್ಟಿನ ಕ್ರಮ ವಹಿಸಲಾಗಿದೆ. ತಲಪಾಡಿ, ನೆಟ್ಟಣಿಗೆ ಮುಡ್ನೂರು, ಸಾರಡ್ಕ, ಜಾಲ್ಸೂರಿನಲ್ಲಿ ಚೆಕ್ಪೋಸ್ಟ್ ಸ್ಥಾಪಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸಂಚಾರ ಹೆಚ್ಚಿರುವಲ್ಲಿ ಚೆಕ್ಪೋಸ್ಟ್ಗಳನ್ನು ಹಾಕಲು ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.</p>.<p>ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸುವವರು ಕಡ್ಡಾಯವಾಗಿ ಆರ್ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಬರಬೇಕು. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ನಡುವೆ ಹಲವಾರು ರೋಗಿಗಳು ಬಂದು ಹೋಗುವುದರಿಂದ ಆಸ್ಪತ್ರೆಗಳಲ್ಲಿ ಆರ್ಟಿಪಿಸಿಎಸ್ ಪರೀಕ್ಷೆ ಮಾಡಿಸಬೇಕು ಎಂದು ತಿಳಿಸಿದರು.</p>.<p>ಗಡಿ ಭಾಗದಲ್ಲಿ ಓಡಾಡುವರ ತಪಾಸಣೆ ಮಾಡಲು ಚೆಕ್ಪೋಸ್ಟ್ಗಳಲ್ಲಿಯೂ ಗಂಟಲು ದ್ರವ ಸಂಗ್ರಹ ಕೇಂದ್ರವನ್ನೂ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯವರು ಕಾಸರಗೋಡು ಸೇರಿದಂತೆ ಬೇರೆಡೆ ಓಡಾಡುತ್ತಿದ್ದರೆ, ಅಲ್ಲಿಂದ ಬರುವಾಗ ಕಡ್ಡಾಯವಾಗಿ ಆರ್ಟಿಪಿಸಿಆರ್ ವರದಿಯನ್ನು ತರಬೇಕಾಗುತ್ತದೆ. ಹಾಗಾಗಿ ಅನಗತ್ಯ ಸಂಚಾರವನ್ನು ನಿಲ್ಲಿಸಬೇಕು ಎಂದು ಹೇಳಿದರು.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ 5ರೊಳಗಿದೆ. ಇದೀಗ 3ನೇ ಅಲೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗುತ್ತಿದ್ದು, ಗಡಿ ಭಾಗದಲ್ಲಿ ತೀವ್ರ ನಿಗಾ ವಹಿಸಲು ಪೊಲೀಸರು ಹಾಗೂ ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದ್ದು, ಕೇರಳದಿಂದ ಜಿಲ್ಲೆಗೆ ಬರುವವರಿಗೆ ಮಂಗಳವಾರ (ಜೂ.29)ದಿಂದ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.</p>.<p>ತಲಪಾಡಿ ಚೆಕ್ಪೋಸ್ಟ್ನಲ್ಲಿ ಸೋಮವಾರ ವಾಹನಗಳ ತಪಾಸಣೆ ನಡೆಸಿದ ಬಳಿಕ ಈ ಮಾಹಿತಿ ನೀಡಿದ ಅವರು, ಸೋಮವಾರ ಯಾವುದೇ ಕಟ್ಟುನಿಟ್ಟು ಮಾಡಿಲ್ಲ. ಆದರೆ, ಮಂಗಳವಾರದಿಂದ ಕಡ್ಡಾಯ ಮಾಡಲಾಗಿದೆ ಎಂದರು.</p>.<p>ಕೇರಳ ಗಡಿ ಭಾಗದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿದ್ದು, ಡೆಲ್ಟಾ ವೇರಿಯಂಟ್ ಪತ್ತೆಯಾಗಿರುವ ಸಂಶಯದ ಮೇರೆಗೆ ಕೇರಳ ಗಡಿಯನ್ನು ಹಂಚಿಕೊಳ್ಳುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ ಎಂದರು.</p>.<p>ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದ ಚೆಕ್ಪೋಸ್ಟ್ಗಳಲ್ಲಿ ಕಟ್ಟು ನಿಟ್ಟಿನ ಕ್ರಮ ವಹಿಸಲಾಗಿದೆ. ತಲಪಾಡಿ, ನೆಟ್ಟಣಿಗೆ ಮುಡ್ನೂರು, ಸಾರಡ್ಕ, ಜಾಲ್ಸೂರಿನಲ್ಲಿ ಚೆಕ್ಪೋಸ್ಟ್ ಸ್ಥಾಪಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸಂಚಾರ ಹೆಚ್ಚಿರುವಲ್ಲಿ ಚೆಕ್ಪೋಸ್ಟ್ಗಳನ್ನು ಹಾಕಲು ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.</p>.<p>ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸುವವರು ಕಡ್ಡಾಯವಾಗಿ ಆರ್ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಬರಬೇಕು. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ನಡುವೆ ಹಲವಾರು ರೋಗಿಗಳು ಬಂದು ಹೋಗುವುದರಿಂದ ಆಸ್ಪತ್ರೆಗಳಲ್ಲಿ ಆರ್ಟಿಪಿಸಿಎಸ್ ಪರೀಕ್ಷೆ ಮಾಡಿಸಬೇಕು ಎಂದು ತಿಳಿಸಿದರು.</p>.<p>ಗಡಿ ಭಾಗದಲ್ಲಿ ಓಡಾಡುವರ ತಪಾಸಣೆ ಮಾಡಲು ಚೆಕ್ಪೋಸ್ಟ್ಗಳಲ್ಲಿಯೂ ಗಂಟಲು ದ್ರವ ಸಂಗ್ರಹ ಕೇಂದ್ರವನ್ನೂ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯವರು ಕಾಸರಗೋಡು ಸೇರಿದಂತೆ ಬೇರೆಡೆ ಓಡಾಡುತ್ತಿದ್ದರೆ, ಅಲ್ಲಿಂದ ಬರುವಾಗ ಕಡ್ಡಾಯವಾಗಿ ಆರ್ಟಿಪಿಸಿಆರ್ ವರದಿಯನ್ನು ತರಬೇಕಾಗುತ್ತದೆ. ಹಾಗಾಗಿ ಅನಗತ್ಯ ಸಂಚಾರವನ್ನು ನಿಲ್ಲಿಸಬೇಕು ಎಂದು ಹೇಳಿದರು.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ 5ರೊಳಗಿದೆ. ಇದೀಗ 3ನೇ ಅಲೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗುತ್ತಿದ್ದು, ಗಡಿ ಭಾಗದಲ್ಲಿ ತೀವ್ರ ನಿಗಾ ವಹಿಸಲು ಪೊಲೀಸರು ಹಾಗೂ ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>