ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು | ದ.ಕ: ಸಿ.ಬಿ.ರಿಷ್ಯಂತ್‌ ಪ್ರಭಾರ ಎಸ್‌.ಪಿ

Published 31 ಮೇ 2023, 16:10 IST
Last Updated 31 ಮೇ 2023, 16:10 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಮ್‌ ಅಮಟೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ್ದು,  ಪ್ರಭಾರ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಐಪಿಎಸ್‌ ಅಧಿಕಾರಿ ರಿಷ್ಯಂತ್‌ ಸಿ.ಬಿ ಅವರನ್ನು ನಿಯೋಜಿಸಲಾಗಿದೆ. ಅವರು ಬುಧವಾರ ಕರ್ತವ್ಯಕ್ಕೆ ಹಾಜರಾದರು.

2013ನೇ ಸಾಲಿನ  ಕರ್ನಾಟಕ ವೃಂದದ ಐಪಿಎಸ್ ಅಧಿಕಾರಿಯಾಗಿರುವ ರಿಷ್ಯಂತ್ ಮಂಗಳೂರಿನಲ್ಲಿ ಎಎಸ್ಪಿಯಾಗಿ, ಬಾಗಲಕೋಟೆ, ದಾವಣಗೆರೆ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ದಾವಣಗೆರೆ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಅವರನ್ನು ವಿಧಾನಸಭಾ ಚುನಾವಣೆ  ಸಂದರ್ಭ ಬೆಂಗಳೂರಿನ ಪೊಲೀಸ್‌ ಮಹಾನಿರ್ದೇಶಕರ ಕಚೇರಿಗೆ ವರ್ಗ ಮಾಡಲಾಗಿತ್ತು.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT