ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಎಂದು ಉಲ್ಲೇಖಿಸಿದ ಸಚಿವ ಅಂಗಾರ

Last Updated 15 ಆಗಸ್ಟ್ 2021, 6:23 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಮೀನುಗಾರಿಕೆ ಸಚಿವ ಎಸ್. ಅಂಗಾರ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಭಾಷಣ ನಡುವೆ ಅವರು ಕರ್ನಾಟಕದ ಮುಖ್ಯಮಂತ್ರಿ ಹೆಸರನ್ನು ಉಲ್ಲೇಖಿಸುವಾಗ ಬಸವರಾಜ ಬೊಮ್ಮಾಯಿ ಬದಲಾಗಿ ‘ಎಸ್.ಆರ್. ಬೊಮ್ಮಾಯಿ’ ನೇತೃತ್ವದಲ್ಲಿ ನಮ್ಮ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯದ ಜತೆಗೆ ಆರ್ಥಿಕ- ಸಾಮಾಜಿಕ ಚಟುವಟಿಕೆಗೆ ಚೈತನ್ಯ ತುಂಬಿದೆ ಎಂದು ಹೇಳಿದರು.

ಪ್ರೇಕ್ಷಕರ ಸಾಲಿನಲ್ಲಿ ಕುಳಿತಿದ್ದ ಎಲ್ಲರೂ ಅವರು ಮುಖ್ಯಮಂತ್ರಿ ಹೆಸರು ತಪ್ಪಾಗಿ ಉಲ್ಲೇಖಿಸಿದ್ದನ್ನು ಗಮನಿಸಿದರು.

ಸಚಿವರಿಗೆ ನೀಡಿದ್ದ ಸಿದ್ಧ‌ ಭಾಷಣದ ಪ್ರತಿಯಲ್ಲಿ ಈ ಪ್ರಮಾದವಾಗಿತ್ತು. ಸಚಿವರು ಅದನ್ನೇ ಓದಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT