ಉಜಿರೆ: ಗುಜರಾತಿನ ಓಂಕಾರ್ ಸಾಧನಾ ಆಶ್ರಮದ ಮಾಧವತೀರ್ಥಜಿ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥೇಶ್ವರನ ದರ್ಶನ ಮಾಡಿ, ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಜತೆ ಮಾತುಕತೆ ನಡೆಸಿದರು. ‘ಮಂಜೂಷಾ’ ವಸ್ತು ಸಂಗ್ರಹಾಲಯ, ಅನ್ನಪೂರ್ಣ ಭೋಜನಾಲಯ, ಬಾಹುಬಲಿ ಬೆಟ್ಟ, ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನವನ್ನು ವೀಕ್ಷಿಸಿ, ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.