'ಹಸಿರು ಉಳಿಸುವ ಕಾರ್ಯದಲ್ಲಿ ಆಡಳಿತ ವರ್ಗ ಕಾರ್ಯಪ್ರವೃತ್ತರಾಗಬೇಕು. ಅವರ ಮೂಲಕ ಮತ್ತು ಜನರಿಗೆ ಪ್ರೇರಣೆ ಸಿಗಬೇಕು ಎಂಬ ಉದ್ದೇಶದಿಂದ ನಾವು ಮೂರು ವರ್ಷಗಳಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಜಿಲ್ಲಾಧಿಕಾರಿ, ಪೋಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಪೊಲೀಸ್ ಠಾಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇಂದು ಗಿಡಗಳನ್ನು ವಿತರಿಸಿ ಹಸಿರು ಉಳಿಸಿ, ಬೆಳೆಸಲು ಕಾಳಜಿ ವಹಿಸುವಂತೆ ಕೋರಿದ್ದೇವೆ’ ಎಂದು ಸಹ್ಯಾದ್ರಿ ಸಂಚಯದ ದಿನೇಶ ಹೊಳ್ಳ ’ಪ್ರಜಾವಾಣಿ‘ಗೆ ತಿಳಿಸಿದರು.