<p><strong>ಮಂಗಳೂರು: </strong>ಹೊಸ ಶಿಕ್ಷಣ ನೀತಿ (ಎನ್ಇಪಿ) ಪ್ರಕಾರ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಕಡ್ಡಾಯವಾಗಿದ್ದು, ಶಿಕ್ಷಕರ ತರಬೇತಿಗಾಗಿ ಎರಡು ದಿನಗಳ ಯೋಗ ಶಿಕ್ಷಣ ಕಾರ್ಯಾಗಾರ ನಗರದ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನಲ್ಲಿ ಈಚೆಗೆ ನಡೆಯಿತು.</p>.<p>ದೇಲಂಪಾಡಿ ಯೋಗ ಪ್ರತಿಷ್ಠಾನದ ಸಹಯೋಗದಲ್ಲಿ ಕಾಲೇಜಿನ ಹಳೆವಿದ್ಯಾರ್ಥಿ, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನಡೆಯಿತು.</p>.<p>ಗೋಪಾಲಕೃಷ್ಣ ದೇಲಂಪಾಡಿಕಾರ್ಯಾಗಾರ ವನ್ನು ಉದ್ಘಾಟಿಸಿ ಮಾತನಾಡಿ, ‘ಯೋಗ ಶಿಕ್ಷಣ ವಿದ್ಯಾರ್ಥಿಗಳಿಗೆ ಅತೀ ಅಗತ್ಯ, ಸಕಾರಾತ್ಮಕ ಬೆಳವಣಿಗೆ ಯೋಗದಿಂದ ಸಾಧ್ಯ’ ಎಂದರು. ನೀತಾ ಶೆಟ್ಟಿ ಹಾಗೂ ಭವಾನಿ ರಾವ್ ಯೋಗ ಪ್ರಾತ್ಯಕ್ಷಿಕೆಯಲ್ಲಿ ಸಹಕರಿಸಿದರು.</p>.<p>ಪ್ರಾಂಶುಪಾಲ ಡಾ. ಪ್ರವೀಣ್ ಮಾರ್ಟಿಸ್ ಮಾತನಾಡಿ, ವಿದ್ಯಾರ್ಥಿಗಳ ಬೌದ್ಧಿಕ ವಿಕಸನಕ್ಕೆ ಯೋಗ ಮತ್ತು ಧ್ಯಾನ ಸಹಕಾರಿ’ ಎಂದರು. ವಿದ್ಯಾರ್ಥಿ ಕ್ಷೇಮಪಾಲನಾ ಡೀನ್ ಡಾ. ಈಶ್ವರ ಭಟ್ ಎಸ್., ನಿರ್ದೇಶಕರಾದ ಡಾ. ಡೆನ್ನಿಸ್ ಫರ್ನಾಂಡಿಸ್, ಪರೀಕ್ಷಾಂಗ ಕುಲಸಚಿವ ಡಾ. ಆಲ್ವಿನ್ ಡೇಸಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಹೊಸ ಶಿಕ್ಷಣ ನೀತಿ (ಎನ್ಇಪಿ) ಪ್ರಕಾರ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಕಡ್ಡಾಯವಾಗಿದ್ದು, ಶಿಕ್ಷಕರ ತರಬೇತಿಗಾಗಿ ಎರಡು ದಿನಗಳ ಯೋಗ ಶಿಕ್ಷಣ ಕಾರ್ಯಾಗಾರ ನಗರದ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನಲ್ಲಿ ಈಚೆಗೆ ನಡೆಯಿತು.</p>.<p>ದೇಲಂಪಾಡಿ ಯೋಗ ಪ್ರತಿಷ್ಠಾನದ ಸಹಯೋಗದಲ್ಲಿ ಕಾಲೇಜಿನ ಹಳೆವಿದ್ಯಾರ್ಥಿ, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನಡೆಯಿತು.</p>.<p>ಗೋಪಾಲಕೃಷ್ಣ ದೇಲಂಪಾಡಿಕಾರ್ಯಾಗಾರ ವನ್ನು ಉದ್ಘಾಟಿಸಿ ಮಾತನಾಡಿ, ‘ಯೋಗ ಶಿಕ್ಷಣ ವಿದ್ಯಾರ್ಥಿಗಳಿಗೆ ಅತೀ ಅಗತ್ಯ, ಸಕಾರಾತ್ಮಕ ಬೆಳವಣಿಗೆ ಯೋಗದಿಂದ ಸಾಧ್ಯ’ ಎಂದರು. ನೀತಾ ಶೆಟ್ಟಿ ಹಾಗೂ ಭವಾನಿ ರಾವ್ ಯೋಗ ಪ್ರಾತ್ಯಕ್ಷಿಕೆಯಲ್ಲಿ ಸಹಕರಿಸಿದರು.</p>.<p>ಪ್ರಾಂಶುಪಾಲ ಡಾ. ಪ್ರವೀಣ್ ಮಾರ್ಟಿಸ್ ಮಾತನಾಡಿ, ವಿದ್ಯಾರ್ಥಿಗಳ ಬೌದ್ಧಿಕ ವಿಕಸನಕ್ಕೆ ಯೋಗ ಮತ್ತು ಧ್ಯಾನ ಸಹಕಾರಿ’ ಎಂದರು. ವಿದ್ಯಾರ್ಥಿ ಕ್ಷೇಮಪಾಲನಾ ಡೀನ್ ಡಾ. ಈಶ್ವರ ಭಟ್ ಎಸ್., ನಿರ್ದೇಶಕರಾದ ಡಾ. ಡೆನ್ನಿಸ್ ಫರ್ನಾಂಡಿಸ್, ಪರೀಕ್ಷಾಂಗ ಕುಲಸಚಿವ ಡಾ. ಆಲ್ವಿನ್ ಡೇಸಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>