<p><strong>ಉಳ್ಳಾಲ</strong>: ಇಲ್ಲಿನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಭಾನುವಾರ ರಾತ್ರಿ ನಡೆದ ರೌಡಿಶೀಟರ್ ಸಮೀರ್ ಅಲಿಯಾಸ್ ಕಡಪ್ಪುರ ಸಮೀರ್ ಹತ್ಯೆ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಕಿನ್ಯದ ನಿಯಾಜ್ (23), ಕೃಷ್ಣಾಪುರ ಎಂಟನೇ ಬ್ಲಾಕ್ನ ಮೊಹಮ್ಮದ್ ನೌಷಾದ್ (26), ಶಕ್ತಿನಗರದ ತನ್ನೀರ್ ಅಲಿಯಾಸ್ ತನ್ನು (27) ಹಾಗೂ ಕಾಪುವಿನ ಮೊಹಮ್ಮದ್ ಇಕ್ಬಾಲ್ (28) ಬಂಧಿತರು ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.</p>.<p>‘ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ. ಸಮೀರ್ ಹಾಗೂ ಬಂಧಿತ ಆರೋಪಿಗಳ ನಡುವೆ ವೈರತ್ವ ಇತ್ತು. ಆರೋಪಿ ಮೊಹಮ್ಮದ್ ನೌಷಾದ್ ಬಾಮೈದ ಇಲ್ಯಾಸ್ ಅಲಿಯಾಸ್ ಟಾರ್ಗೆಟ್ ಇಲ್ಯಾಸ್ ಹತ್ಯೆ 2018ರಲ್ಲಿ ನಗರದಲ್ಲಿ ನಡೆದಿತ್ತು. ಈ ಸಂಬಂಧ ಸಮೀರ್ ಹಾಗೂ ಇತರ ಆರೋಪಿಗಳನ್ನು ಬಂಧಿಸಲಾಗಿತ್ತು. ಇಲ್ಯಾಸ್ ಕೊಲೆಗೆ ಪ್ರತೀಕಾರವಾಗಿ ಸಮೀರ್ ಕೊಲೆ ನಡೆಸಲಾಗಿದೆ ಎಂಬ ಅಂಶ ತನಿಖೆಯಲ್ಲಿ ಗೊತ್ತಾಗಿದೆ’ ಎಂದು ತಿಳಿಸಿದ್ದಾರೆ</p>.<p>‘ಮೊಹಮ್ಮದ್ ನೌಷಾದ್ ಇತರರ ಜೊತೆ ಸೇರಿ ಕೊಲೆಗೆ ಸಂಚು ರೂಪಿಸಿ ಅನುಷ್ಠಾನಗೊಳಿಸಿದ್ದಾನೆ. ಈ ಕೊಲೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಅಪಹರಣ, ಕೊಲೆ ಯತ್ನ, ಮಾದಕ ಪದಾರ್ಥ ಕಳ್ಳಸಾಗಣೆ ಪ್ರಕರಣಗಳಲ್ಲೂ ನೌಷಾದ್ ಆರೋಪಿಯಾಗಿದ್ದ. ಸುರತ್ಕಲ್ ಹಾಗೂ ಸಕಲೇಶಪುರ ಠಾಣೆಗಳಲ್ಲಿ ಆತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ತನ್ನೀರ್ ವಿರುದ್ಧ ಜಾನುವಾರು ಕಳ್ಳತನ ಹಾಗೂ ದರೋಡೆಗೆ ಯತ್ನ ಕುರಿತು ಈ ಹಿಂದೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು’ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯಕ್, ಉಳ್ಳಾಲ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಎಚ್.ಎನ್., ಪಿಎಸ್ಐ ಶೀತಲ್ ಅಲಗೂರ್, ಸಂತೋಷ್ ಕುಮಾರ್ ಡಿ., ಧನರಾಜ್ ಎಸ್. ಪ್ರಣೇಶ್ ಕುಮಾರ್ ಬಿ. ಅವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ</strong>: ಇಲ್ಲಿನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಭಾನುವಾರ ರಾತ್ರಿ ನಡೆದ ರೌಡಿಶೀಟರ್ ಸಮೀರ್ ಅಲಿಯಾಸ್ ಕಡಪ್ಪುರ ಸಮೀರ್ ಹತ್ಯೆ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಕಿನ್ಯದ ನಿಯಾಜ್ (23), ಕೃಷ್ಣಾಪುರ ಎಂಟನೇ ಬ್ಲಾಕ್ನ ಮೊಹಮ್ಮದ್ ನೌಷಾದ್ (26), ಶಕ್ತಿನಗರದ ತನ್ನೀರ್ ಅಲಿಯಾಸ್ ತನ್ನು (27) ಹಾಗೂ ಕಾಪುವಿನ ಮೊಹಮ್ಮದ್ ಇಕ್ಬಾಲ್ (28) ಬಂಧಿತರು ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.</p>.<p>‘ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ. ಸಮೀರ್ ಹಾಗೂ ಬಂಧಿತ ಆರೋಪಿಗಳ ನಡುವೆ ವೈರತ್ವ ಇತ್ತು. ಆರೋಪಿ ಮೊಹಮ್ಮದ್ ನೌಷಾದ್ ಬಾಮೈದ ಇಲ್ಯಾಸ್ ಅಲಿಯಾಸ್ ಟಾರ್ಗೆಟ್ ಇಲ್ಯಾಸ್ ಹತ್ಯೆ 2018ರಲ್ಲಿ ನಗರದಲ್ಲಿ ನಡೆದಿತ್ತು. ಈ ಸಂಬಂಧ ಸಮೀರ್ ಹಾಗೂ ಇತರ ಆರೋಪಿಗಳನ್ನು ಬಂಧಿಸಲಾಗಿತ್ತು. ಇಲ್ಯಾಸ್ ಕೊಲೆಗೆ ಪ್ರತೀಕಾರವಾಗಿ ಸಮೀರ್ ಕೊಲೆ ನಡೆಸಲಾಗಿದೆ ಎಂಬ ಅಂಶ ತನಿಖೆಯಲ್ಲಿ ಗೊತ್ತಾಗಿದೆ’ ಎಂದು ತಿಳಿಸಿದ್ದಾರೆ</p>.<p>‘ಮೊಹಮ್ಮದ್ ನೌಷಾದ್ ಇತರರ ಜೊತೆ ಸೇರಿ ಕೊಲೆಗೆ ಸಂಚು ರೂಪಿಸಿ ಅನುಷ್ಠಾನಗೊಳಿಸಿದ್ದಾನೆ. ಈ ಕೊಲೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಅಪಹರಣ, ಕೊಲೆ ಯತ್ನ, ಮಾದಕ ಪದಾರ್ಥ ಕಳ್ಳಸಾಗಣೆ ಪ್ರಕರಣಗಳಲ್ಲೂ ನೌಷಾದ್ ಆರೋಪಿಯಾಗಿದ್ದ. ಸುರತ್ಕಲ್ ಹಾಗೂ ಸಕಲೇಶಪುರ ಠಾಣೆಗಳಲ್ಲಿ ಆತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ತನ್ನೀರ್ ವಿರುದ್ಧ ಜಾನುವಾರು ಕಳ್ಳತನ ಹಾಗೂ ದರೋಡೆಗೆ ಯತ್ನ ಕುರಿತು ಈ ಹಿಂದೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು’ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯಕ್, ಉಳ್ಳಾಲ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಎಚ್.ಎನ್., ಪಿಎಸ್ಐ ಶೀತಲ್ ಅಲಗೂರ್, ಸಂತೋಷ್ ಕುಮಾರ್ ಡಿ., ಧನರಾಜ್ ಎಸ್. ಪ್ರಣೇಶ್ ಕುಮಾರ್ ಬಿ. ಅವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>