ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ತಿಂಗಳಿಂದ ಮರಳು ಗಣಿಗಾರಿಕೆ ಸಂಪೂರ್ಣವಾಗಿ ನಿಂತಿದೆ. ಎನ್ಐಟಿಕೆ ತಾಂತ್ರಿಕ ಸಮಿತಿಯು ನೇತ್ರಾವತಿ, ಫಲ್ಗುಣಿ ಮತ್ತು ಶಾಂಭವಿ ನದಿಗಳಲ್ಲಿನ ಹೊಸ ಮರಳು ದಿಬ್ಬಗಳನ್ನು ಗುರುತಿಸಿ, ಸಿದ್ಧಪಡಿಸಿದ ವರದಿಯನ್ನು ಜಿಲ್ಲಾಡಳಿತದ ಸಮಿತಿಯು ಪರಿಶೀಲಿಸಿದ್ದು, ಮೇನಲ್ಲಿ ಕೆಸಿಜೆಡ್ಎಂಗೆ ಕಳುಹಿಸಲಾಗಿದೆ. ಕೋವಿಡ್–19 ಸಾಂಕ್ರಾಮಿಕದಿಂದಾಗಿ ಕೆಸಿಜೆಡ್ಎಂ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ.